ನಾಳೆಯಿಂದ ಒಡಿಯೂರಿನಲ್ಲಿ ಶ್ರೀ ದತ್ತ ಜಯಂತಿ ಮಹೋತ್ಸವ-ಶ್ರೀ ದತ್ತಮಹಾಯಾಗ ಸಪ್ತಾಹ

FILE PHOTO

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ 23ರಿಂದ 29ರವರೆಗೆ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ಮಾರ್ಗದರ್ಶನದಲ್ಲಿ ವೇ|ಮೂ| ಕುರೋಮೂಲೆ ಚಂದ್ರಶೇಖರ ಉಪಾಧ್ಯಾಯರ ಪೌರೋಹಿತ್ಯದಲ್ಲಿ ಶ್ರೀ ದತ್ತ ಜಯಂತಿ ಮಹೋತ್ಸವ-ಶ್ರೀ ದತ್ತ ಮಹಾಯಾಗ ಸಪ್ತಾಹವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿರುವುದು.

ಈ ಸಂದರ್ಭ ಶ್ರೀ ಗುರುದತ್ತಾತ್ರೇಯರ ಅವತಾರ ವಿಶೇಷ ಸಮರಸ ತತ್ತ್ವವನ್ನು ಜಗತ್ತಿಗೆ ಸಾರಿ, ವಿಶ್ವ ಮಾನವ ಧರ್ಮದ ಅರಿವು ಮೂಡಿಸುವುದೇ ಆಗಿದೆ. ಇಂತಹ ತತ್ತ್ವವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದಕ್ಕೆ ಸಿದ್ಧರಿರುವ ಗುರುಭಜಕರಿಗೆ ’ಮಾಲಾಧಾರಣೆ’(ವೃತಾಚರಣೆ) ಮಾಡುವುದಕ್ಕೆ ಸಪ್ತಾಹ ಪರ್ಯಂತ ಅವಕಾಶವನ್ನು ಕಲ್ಪಿಸಲಾಗಿದೆ. ಡಿ.23ನೇ ಬುಧವಾರ ಬೆಳಗ್ಗೆ ದೀಪಾರಾಧನೆ, ಶ್ರೀಗಣಪತಿ ಹವನದೊಂದಿಗೆ ಶ್ರೀ ದತ್ತ ಮಹಾಯಾಗ ಸಪ್ತಾಹ ಆರಂಭ. ಪೂಜ್ಯ ಶ್ರೀಗಳವರ ದಿವ್ಯ ಉಪಸ್ಥಿತಿಯಲ್ಲಿ ಶ್ರೀ ದತ್ತಮಾಲಾಧಾರಣೆ. ಮಧ್ಯಾಹ್ನ ಮಹಾಪೂಜೆ, ಸಂಜೆ ಘಂಟೆ ೭ ರಿಂದ ಶ್ರೀ ದತ್ತಾಂಜನೇಯ ದೇವರ ಪಲ್ಲಕಿ ಉತ್ಸವ, ರಂಗಪೂಜೆ, ಬೆಳ್ಳಿ ರಥೋತ್ಸವ ನಡೆಯಲಿದೆ.

ಪ್ರತಿದಿನ ಬೆಳಿಗ್ಗೆ ಶ್ರೀ ಗುರುಚರಿತ್ರೆ ಪಾರಾಯಣ, ಮಧ್ಯಾಹ್ನ ಮಹಾಪೂಜೆ, ಮಹಾಸಂತರ್ಪಣೆ ಹಾಗೂ ರಾತ್ರಿ ರಂಗಪೂಜೆ, ಬೆಳ್ಳಿ ರಥೋತ್ಸವ ಸೇವೆ ನಡೆಯುವುವು.

ಜಾಹೀರಾತು

ಡಿ.29ರಂದು ಬೆಳಿಗ್ಗೆ ಸ್ವಯಂಭೂ ನಾಗಸನ್ನಿಧಿಯಲ್ಲಿ ನಾಗತಂಬಿಲ, ಬಳಿಕ ಪೂಜ್ಯ ಶ್ರೀಗಳವರಿಂದ ಅನುಗ್ರಹ ಸಂದೇಶ. ಮಧ್ಯಾಹ್ನ ಶ್ರೀ ದತ್ತ ಮಹಾಯಾಗ ಸಪ್ತಾಹದ ಪೂರ್ಣಾಹುತಿ, ಮಹಾಪೂಜೆ, ಮಹಾಸಂತರ್ಪಣೆ. ರಾತ್ರಿ ರಂಗಪೂಜೆ, ಮಹಾಪೂಜೆ, ಬೆಳ್ಳಿ ರಥೋತ್ಸವ ಸೇವೆ ಹಾಗೂ ಉಯ್ಯಾಲೆ ಸೇವೆಗಳು ನಡೆಯಲಿದೆ. ಎಲ್ಲಾ ಕಾರ್ಯಕ್ರಮಗಳನ್ನು ಸರಕಾರದ ಕೋವಿಡ್ 19ರ ನಿಯಮಗಳನ್ನು ಪಾಲಿಸಲಾಗುವುದು ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ನಾಳೆಯಿಂದ ಒಡಿಯೂರಿನಲ್ಲಿ ಶ್ರೀ ದತ್ತ ಜಯಂತಿ ಮಹೋತ್ಸವ-ಶ್ರೀ ದತ್ತಮಹಾಯಾಗ ಸಪ್ತಾಹ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*