ಬಂಟ್ವಾಳ: ಶಿಸ್ತುಬದ್ಧ ಪಕ್ಷವಾದ ಬಿಜೆಪಿಯಲ್ಲಿ ಯತ್ನಾಳ್ ಅವರಂಥ ಶಾಸಕರ ನಡವಳಿಕೆಗಳು ಪಕ್ಷಕ್ಕೆ ಗೌರವ ತರುವಂಥದ್ದಲ್ಲ. ಇವುಗಳನ್ನು ಪಕ್ಷದ ನಾಯಕತ್ವ ಗಮನಿಸುತ್ತಿದ್ದು, ಕ್ರಮ ಕೈಗೊಳ್ಳುವ ವಿಚಾರ ಅವರಿಗೆ ಬಿಟ್ಟದ್ದು ಎಂದು ಕೇಂದ್ರ ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.
ಕಲ್ಲಡ್ಕದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಬಸವರಾಜ ಪಾಟೀಲ್ ಯತ್ನಾಳ್ ಅವರ ಇತ್ತೀಚಿನ ಹೇಳಿಕೆಗಳ ಕುರಿತು ಉಲ್ಲೇಖಿಸಿ, ಇತ್ತೀಚಿನ ದಿನಗಳಲ್ಲಿ ಅವರ ನಡವಳಿಕೆಗಳು, ಪಕ್ಷ ನಾಯಕತ್ವದ ಕುರಿತ ಹೇಳಿಕೆಗಳು ಬಿಜೆಪಿ ಶಾಸಕರಾಗಿ ಶೋಭೆ ತರುವಂಥದ್ದಲ್ಲ. ಹಿಂದೆ ನಾನು ಪಕ್ಷದ ರಾಜ್ಯಾಧ್ಯಕ್ಷನಾಗಿದ್ದಾಗ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಂಡಿದ್ದೆ. ಈಗ ಮತ್ತೂ ಸರಿಯಾಗುವುದಿಲ್ಲ ಎಂದಾದರೆ, ಪಕ್ಷದ ನಾಯಕತ್ವ ಗಮನ ಹರಿಸಬಹುದು. ಶಿಸ್ತುಬದ್ಧ ಪಕ್ಷ ಎಂದಾದ ಮೇಲೆ ನಾವೆಲ್ಲರೂ ಶಿಸ್ತಿನಿಂದ ಕೆಲಸ ಮಾಡಲು ಪ್ರಯತ್ನಿಸಬೇಕು ಎಂದು ಹೇಳಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…