ಪ್ರಮುಖ ಸುದ್ದಿಗಳು

ಯತ್ನಾಳ್ ಇತ್ತೀಚಿನ ಹೇಳಿಕೆಗಳು ಪಕ್ಷಕ್ಕೆ ಗೌರವ ತರುವಂಥದ್ದಲ್ಲ: ಡಿ.ವಿ.ಸದಾನಂದ ಗೌಡ

ಬಂಟ್ವಾಳ: ಶಿಸ್ತುಬದ್ಧ ಪಕ್ಷವಾದ ಬಿಜೆಪಿಯಲ್ಲಿ ಯತ್ನಾಳ್ ಅವರಂಥ ಶಾಸಕರ ನಡವಳಿಕೆಗಳು ಪಕ್ಷಕ್ಕೆ ಗೌರವ ತರುವಂಥದ್ದಲ್ಲ. ಇವುಗಳನ್ನು ಪಕ್ಷದ ನಾಯಕತ್ವ ಗಮನಿಸುತ್ತಿದ್ದು, ಕ್ರಮ ಕೈಗೊಳ್ಳುವ ವಿಚಾರ ಅವರಿಗೆ ಬಿಟ್ಟದ್ದು ಎಂದು ಕೇಂದ್ರ ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.

ಕಲ್ಲಡ್ಕದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಬಸವರಾಜ ಪಾಟೀಲ್ ಯತ್ನಾಳ್ ಅವರ ಇತ್ತೀಚಿನ ಹೇಳಿಕೆಗಳ ಕುರಿತು ಉಲ್ಲೇಖಿಸಿ, ಇತ್ತೀಚಿನ ದಿನಗಳಲ್ಲಿ ಅವರ ನಡವಳಿಕೆಗಳು, ಪಕ್ಷ ನಾಯಕತ್ವದ ಕುರಿತ ಹೇಳಿಕೆಗಳು ಬಿಜೆಪಿ ಶಾಸಕರಾಗಿ ಶೋಭೆ ತರುವಂಥದ್ದಲ್ಲ. ಹಿಂದೆ ನಾನು ಪಕ್ಷದ ರಾಜ್ಯಾಧ್ಯಕ್ಷನಾಗಿದ್ದಾಗ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಂಡಿದ್ದೆ. ಈಗ ಮತ್ತೂ ಸರಿಯಾಗುವುದಿಲ್ಲ ಎಂದಾದರೆ, ಪಕ್ಷದ ನಾಯಕತ್ವ ಗಮನ ಹರಿಸಬಹುದು. ಶಿಸ್ತುಬದ್ಧ ಪಕ್ಷ ಎಂದಾದ ಮೇಲೆ ನಾವೆಲ್ಲರೂ ಶಿಸ್ತಿನಿಂದ ಕೆಲಸ ಮಾಡಲು ಪ್ರಯತ್ನಿಸಬೇಕು ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ