ಸವಾಲುಗಳನ್ನು ಎದುರಿಸಿ ಚುನಾವಣೆಗೆ ಸ್ಪರ್ಧಿಸಿದ ಪಕ್ಷ ಬೆಂಬಲಿತರು: ರಮಾನಾಥ ರೈ

ಬಂಟ್ವಾಳ: ಸವಾಲುಗಳನ್ನು ಎದುರಿಸಿ ಕಣಕ್ಕಿಳಿದ ಕಾಂಗ್ರೆಸ್ ಬೆಂಬಲಿತರನ್ನು ಅಭಿನಂದಿಸುತ್ತೇನೆ ಎಂದು ಮಾಜಿ ಸಚಿವ ಬಿ‌.ರಮಾನಾಥ ರೈ ಹೇಳಿದರು.

ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಂಟ್ವಾಳ ಸ್ಪರ್ಶ ಕಲಾ ಮಂದಿರದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಭ್ಯರ್ಥಿಯಾಗಿ ಅವಕಾಶ ದೊರಕುವುದುದೇ ದೊಡ್ಡ ಋಣ. ಪಂಚಾಯಿತಿ ಸದಸ್ಯನಾದೊಡನೆ ಕಾಂಗ್ರೆಸ್ ಋಣ ಅವರಿಗೆ ಇರುತ್ತದೆ. ಕಾಂಗ್ರೆಸ್ ಋಣದಿಂದ ಮುಕ್ತನಾಗಲು ಜನ್ಮಜನ್ಮಾಂತರಕ್ಕೂ ಅಸಾಧ್ಯ. ಕಾಂಗ್ರೆಸ್ ನನ್ನ ಧರ್ಮ ಎಂದು ಪಕ್ಷ ತ್ಯಜಿಸುವವರಿಗೆ ತಿರುಗೇಟು ನೀಡಿದರು.ಈ ಬಾರಿ ಗ್ರಾಪಂ ಚುನಾವಣೆಯಲ್ಲಿ ಸಾಮಾಜಿಕ ನ್ಯಾಯವಂಚಿತರಿಗೆ ಓಟಿಗೆ ನಿಲ್ಲಲೂ ಆಗದೆ ಸಮಸ್ಯೆಗಳು ಉಂಟಾಗಿದ್ದವು. ಆದರೆ ಯಾರ ದಬ್ಬಾಳಿಕೆಗೆ ಜಗ್ಗದೆ ನೀವು ಸ್ಪರ್ಧಿಸಿದ್ದಕ್ಕೆ ಅಭಿನಂದನೆ ಎಂದು ರೈ ಹೇಳಿದರು.

ಜಾಹೀರಾತು

ಪಶ್ಚಿಮವಾಹಿನಿ ಯೋಜನೆ ಆಗಬೇಕು ಎಂದು ಒತ್ತಾಯಿಸಿ ನಿಯೋಗ ಕೊಂಡೊಯ್ದದ್ದನ್ನು ನೆನಪಿಸಿದ ರೈ, ಪ್ರಚಾರಕ್ಕಾಗಿ ಯೋಜನೆ ವಿರೋಧಿಸಿ ಪಾದಯಾತ್ರೆ ನಡೆಸಿದವರು ಇಂದು ಪಕ್ಷವೊಂದರ ರಾಜ್ಯಾಧ್ಯಕ್ಷರಾಗಿ ಕೋಲಾರಕ್ಕೆ ನೀರು ಹರಿಸುವುದು ತಮ್ಮ ಸಾಧನೆ ಎಂದು ಹೇಳಿರುವುದಾಗಿ ಆರೋಪಿಸಿದರು.  ಪ್ರತಿ ಗ್ರಾಪಂಗಳಿಗೆ 20 ಮನೆಗಳನ್ನು ಕೊಡುತ್ತೇವೆ ಎಂಬುದು ಕೇವಲ ಕಡತಗಳಲ್ಲಿ ಉಳಿದಿವೆ ಎಂದು ರೈ ಆರೋಪಿಸಿದರು.

ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಸ್ವಾಗತಿಸಿ ಮಾತನಾಡಿ, ಪಕ್ಷಕ್ಕೆ ನಾಯಕರು ಇವತ್ತು ಬರುತ್ತಾರೆ, ನಾಳೆ ಹೋಗಬಹುದು ಆದರೆ ಕಾರ್ಯಕರ್ತರು ಪಕ್ಷದ ಆಸ್ತಿ ಎಂದರು.

ಜಿಪಂ ಸದಸ್ಯರಾದ ಬಿ.ಪದ್ಮಶೇಖರ ಜೈನ್, ಎಂ.ಎಸ್.ಮಹಮ್ಮದ್, ತಾಪಂ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಎಪಿಎಂಸಿ ಮಾಜಿ ಅಧ್ಯಕ್ಷ ಪದ್ಮನಾಭ ರೈ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಜಯಂತಿ ಪೂಜಾರಿ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ಪಿಎಲ್.ಡಿ. ಬ್ಯಾಂಕಿನ ಮಾಜಿ ಅಧ್ಯಕ್ಷ ಸುದರ್ಶನ ಜೈನ್, ಪುರಸಭಾ ಅಧ್ಯಕ್ಷ ಮಹಮ್ಮದ್ ಶರೀಫ್,  ಪ್ರಮುಖರಾದ ಅಮ್ಮು ರೈ, ಜಿನರಾಜ ಆರಿಗ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಪುರಸಭಾ ಸದಸ್ಯ ಜನಾರ್ದನ ಚಂಡ್ತಿಮಾರ್, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್ ಉಪಸ್ಥಿತರಿದ್ದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ ಮತ್ತು ಬೇಬಿ ಕುಂದರ್ ಅಭ್ಯರ್ಥಿಗಳ ಹೆಸರು ವಾಚಿಸಿದರು. ಜಗದೀಶ ಕೊಯ್ಲ ಕಾರ್ಯಕ್ರಮ ನಿರೂಪಿಸಿದರು. ಇದೇ ವೇಳೆ ಗ್ರಾಪಂಗಳಲ್ಲಿ ಕಾಂಗ್ರೆಸ್ ಬೆಂಬಲಿತರಾಗಿ ಸ್ಪರ್ಧಿಸಿದವರ ಹೆಸರು ಹೇಳಿ ಅವರನ್ನು ಅಭಿನಂದಿಸಲಾಯಿತು. ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರಿದವರನ್ನು ಸ್ವಾಗತಿಸಲಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸವಾಲುಗಳನ್ನು ಎದುರಿಸಿ ಚುನಾವಣೆಗೆ ಸ್ಪರ್ಧಿಸಿದ ಪಕ್ಷ ಬೆಂಬಲಿತರು: ರಮಾನಾಥ ರೈ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*