ಬಂಟ್ವಾಳ: ದ.ಕ.ಜಿಲ್ಲಾ ಕಾನೂನು ವೇದಿಕೆ ಬಂಟ್ವಾಳ ಘಟಕ ಹಾಗೂ ಬಂಟ್ವಾಳ ವಕೀಲರ ಸಂಘದ ಸಹಯೋಗದಲ್ಲಿ ಕಾನೂನು ಕಾರ್ಯಾಗಾರ ಶನಿವಾರ ಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.
ದೇವಸ್ಥಾನದ ಪ್ರಧಾನ ಅರ್ಚಕ ಈಶ್ವರ ಭಟ್ ಕೈಯೂರು ಉದ್ಘಾಟಿಸಿ ಶುಭಹಾರೈಸಿದರು. ದ.ಕ.ಜಿಲ್ಲಾ ಕಾನೂನು ವೇದಿಕೆಯ ಅಧ್ಯಕ್ಷ ಎಸ್.ಪಿ.ಚೆಂಗಪ್ಪ ಮಾತನಾಡಿ, ಕಾನೂನು ವೇದಿಕೆಯು ಜಿಲ್ಲೆಯ ಎಲ್ಲಾ ವಕೀಲರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಲು ರಚನೆಯಾದ ಸಂಸ್ಥೆ ಎಂದರು. ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಜೈನ್ ಶುಭ ಹಾರೈಸಿದರು. ಕಾನೂನು ವೇದಿಕೆಯ ಬಂಟ್ವಾಳ ಘಟಕದ ಅಧ್ಯಕ್ಷ ಸುರೇಶ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉಪಾಧ್ಯಕ್ಷ ಉಮೇಶ್ಕುಮಾರ್ ವೈ, ಪ್ರಧಾನ ಕಾರ್ಯದರ್ಶಿ ಬಿ.ಉದನೇಶ್ವರ್, ಸಂಘಟನಾ ಕಾರ್ಯದರ್ಶಿ ವೀರೇಂದ್ರ ಎಂ. ಸಿದ್ದಕಟ್ಟೆ ಉಪಸ್ಥಿತರಿದ್ದರು.
ಉಪನ್ಯಾಸದ ಮೊದಲನೇ ಅವಧಿಯಲ್ಲಿ ಹಿರಿಯ ವಕೀಲ ಜಯರಾಮ ಪದಕಣ್ಣಾಯ ಕ್ರಿಮಿನಲ್ ಕೇಸುಗಳಲ್ಲಿ ಪಾಟಿ ಸವಾಲಿನ ಕೌಶಲ್ಯದ ಕುರಿತು ಸಲಹೆ ನೀಡಿದರು. ಎರಡನೇ ಅವಧಿಯಲ್ಲಿ ಹಿರಿಯ ವಕೀಲ ಪುಂಡಿಕಾಯಿ ನಾರಾಯಣ ಭಟ್ ಅವರು, ಸಿವಿಲ್ ಪ್ರಕ್ರಿಯೆ ಸಂಹಿತೆ ಮತ್ತು ಸಿವಿಲ್ ದಾವೆ ಸಲ್ಲಿಸುವಾಗ ಅನುಸರಿಸಬೇಕಾದ ಮುಖ್ಯ ವಿಷಯಗಳ ಕುರಿತು ಮಾಹಿತಿ ನೀಡಿದರು. ನ್ಯಾಯವಾದಿಗಳಾದ ಸುರೇಶ್ ಪೂಜಾರಿ ಸ್ವಾಗತಿಸಿದರು. ಬಂಟ್ವಾಳ ಘಟಕದ ಕಾರ್ಯದರ್ಶಿ ರವೀಂದ್ರ ಕುಕ್ಕಾಜೆ ವಂದಿಸಿದರು. ಮೋಹನ್ಕುಮಾರ್ ಕಡೇಶ್ವಾಲ್ಯ ನಿರ್ವಹಿಸಿದರು. ಬಂಟ್ವಾಳ ವಕೀಲರ ಸಂಘ ಆಶ್ರಯದಲ್ಲಿ ಕಾನೂನು ಕಾರ್ಯಾಗಾರ ಉದ್ಘಾಟನೆ ನಡೆಯಿತು.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…