ತುಳು ಚಿತ್ರರಂಗಕ್ಕೆ ಗುಣಮಟ್ಟದ ಸ್ಕ್ರಿಪ್ಟ್, ಹೊಸತನ ಅಗತ್ಯ: ಹಿರಿಯ ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲ್ ಬೈಲ್

ಬಂಟ್ವಾಳ: ಕಳೆದ 9 ತಿಂಗಳ ಬಳಿಕ ಮಂಕಾಗಿದ್ದ ಕಲಾವಿದರ ಬದುಕಿನಲ್ಲಿ ನಿಧಾನವಾಗಿ ಹೊಸ ಬೆಳಕು‌ ಮೂಡುತ್ತಿರುವ ಈ ಕಾಲಘಟ್ಟದಲ್ಲಿ ಉತ್ತಮ ಗುಣಮಟ್ಟದ ಹೆಚ್ಚು ಚಿತ್ರಗಳು ತಯಾರಾಗಬೇಕಾಗಿದ್ದು,ಈ ದೆಸೆಯಲ್ಲಿ ವಿದ್ಯಾವಂತ ಯುವ ಲೇಖಕರ,ನಿರ್ದೇಶಕರ ಅಗತ್ಯವಿದೆ ಎಂದು ತುಳು ರಂಗಭೂಮಿ ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್ ಹೇಳಿದ್ದಾರೆ. ಪುಂಜಾಲಕಟ್ಟೆಯ ಮಂತ್ರದೇವತೆ ಕ್ರಿಯೇಷನ್ಸ್ ಅವರ ಚಂದ್ರನ್ ಕಿರು ಚಿತ್ರದ ಪ್ರಥಮ ಪೋಸ್ಟರ್ ನ್ನು ಶನಿವಾರ ನಂದಾವರ ಶ್ರೀ ಶಂಕರನಾರಾಯಣ ವಿನಾಯಕ ದುರ್ಗಾಂಭ ಕ್ಷೇತ್ರದಲ್ಲಿ ಅನಾವರಣಗೊಳಿಸಿ ಅವರು ಮಾತನಾಡಿದರು. ಇಂದು ಹೊಸ ಸಿನಿಮಾಗಳು, ಕಿರುಚಿತ್ರಗಳು ನಿರ್ಮಾಣವಾಗುತ್ತಿವೆ. ಆದರೆ ಒಂದೇ ರೀತಿಯ ಕತೆಗಳು ಕಂಡುಬರುತ್ತಿವೆ ಎಂದವರು ವಿಷಾದಿಸಿದರು. ಸಭಾಧ್ಯಕ್ಷತೆ ವಹಿಸಿದ್ದ ಜಿ.ಪಂ.ಸದಸ್ಯ ಎಂ. ತುಂಗಪ್ಪ ಬಂಗೇರ ಅವರು ಮಾತನಾಡಿ, ಯುವಜನತೆ ಮಾಡುವಂತ ಸಮಾಜಮುಖಿ, ಸಂಸ್ಕೃತಿ‌ಯನ್ನು ಉಳಿಸುವ ಕಾರ್ಯಕ್ಕೆ ಹಿರಿಯರು,ನಾಗರಿಕರು ಪ್ರೋತ್ಸಾಹ ನೀಡಬೇಕು ಎಂದರು. ಚಿಣ್ಣರ ಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಸಂಚಾಲಕ ಮೋಹನದಾಸ್ ಕೊಟ್ಟಾರಿ , ಹಿರಿಯ ಕಲಾವಿದರಾದ ಡಿ.ಎಸ್.ಬೋಳಾರ್, ಸ್ವರಾಜ್ ಶೆಟ್ಟಿ, ರಾಜೇಶ್ ಕಣ್ಣೂರು, ಚಿದಾನಂದ ಅದ್ಯಪಾಡಿ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಉದ್ಯಮಿ ಹರೀಂದ್ರ ಪೈ ಶುಭ ಹಾರೈಸಿದರು. ಪ್ರಮುಖರಾದ ನಮ್ಮ ಬಂಟ್ವಾಳ ಸಮೂಹ ಸಂಸ್ಥೆಗಳ ಮುಖ್ಯಸ್ಥ ಪ್ರಶಾಂತ್ ಪುಂಜಾಲಕಟ್ಟೆ, ಕಲಾವಿದ ಚೇತನ್ ರೈ ಮಾಣಿ, ಜೇಸಿ ರಾಜೇಶ್ ಪುಳಿಮಜಲು, ಚಿತ್ರದ ಸಹನಿರ್ದೇಶಕರಾದ ಜಯರಾಜ್ ಅತ್ತಾಜೆ, ಸಚ್ಚಿನ್ ಅತ್ತಾಜೆ, ಕುಶಾಲ್ ಗೌಡ ಹೊಸಮನೆ,ಸಂತೋಷ್ ಮೂರ್ಜೆ ,ರಚನ್ ಅಲಾಡಿ, ಬಾತ್ ಕುಲಾಲ್ , ಚೇತನ್ ಹಾಗೂ ಕಲಾವಿದರು ಉಪಸ್ಥಿತರಿದ್ದರು. ಚಿತ್ರದ ನಿರ್ದೇಶಕ ರಕ್ಷಿತ್ ರೈ ಪ್ರಸ್ತಾವನೆಗೈದರು. ಕಲಾವಿದ ರತ್ನದೇವ್ ಪುಂಜಾಲಕಟ್ಟೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ತುಳು ಚಿತ್ರರಂಗಕ್ಕೆ ಗುಣಮಟ್ಟದ ಸ್ಕ್ರಿಪ್ಟ್, ಹೊಸತನ ಅಗತ್ಯ: ಹಿರಿಯ ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲ್ ಬೈಲ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*