ಬಂಟ್ವಾಳ

ಚುನಾವಣೆಗೆ ತಯಾರಿ, ಕಾರ್ಯಕರ್ತನ ಪಕ್ಷವನ್ನಾಗಿಸುವ ಸಂಕಲ್ಪ: ಸಮಾವೇಶದ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಬಂಟ್ವಾಳ: ವಿಧಾನಸಭೆ ಸಹಿತ ಚುನಾವಣೆಗಳ ಸಂದರ್ಭ ಪಕ್ಷದ ಅಭ್ಯರ್ಥಿಗಳನ್ನು ಮುಂಚಿತವಾಗಿಯೇ ಘೋಷಿಸಬೇಕು ಎಂಬ ಸಲಹೆ ಸಹಿತ ಹಲವು ವಿಚಾರಗಳು ಇಂದು ನಡೆದ ವಿಭಾಗೀಯ ಸಮಾವೇಶದಲ್ಲಿ ಚರ್ಚೆಗೊಳಪಟ್ಟಿವೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಬಂಟ್ವಾಳದಲ್ಲಿ ನಡೆದ ವಿಭಾಗೀಯ ಸಮಾವೇಶದ ವಿಚಾರಗಳನ್ನು ವಿವರಿಸಲು ಬುಧವಾರ ಸಂಜೆ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕರ್ತನ ಧ್ವನಿ ಪಕ್ಷದ ಅಧ್ಯಕ್ಷರ ಧ್ವನಿಯಾಗಬೇಕು, ಪ್ರತಿಯೊಂದು ವಿಧಾನಸಭಾ ಕ್ಷೇತ್ರಗಳಲ್ಲಿರುವ ಜನರ ಧ್ವನಿ ತಿಳಿದು ಜನಪರ ಹೋರಾಟ ರೂಪಿಸಬೇಕು. ಕಾಂಗ್ರೆಸ್ ಪಕ್ಷವನ್ನು ಕಾರ್ಯಕರ್ತರ ಪಕ್ಷವನ್ನಾಗಿ ರೂಪಿಸಲು ತಳಮಟ್ಟದ ಸಂಘಟನೆಗೆ ಬೇಕಾದ ಸಲಹೆ ಸೂಚನೆ, ಲೋಪ ದೋಷಗಳ ಕುರಿತ ಮಾಹಿತಿ ಸಂಗ್ರಹವನ್ನು ಮಾಡಲಾಗಿದೆ. ಪ್ರತಿಯೊಂದು ಬೂತ್ ಗಳಲ್ಲಿ ಡಿಜಿಟಲ್ ಯೂತ್ ಎಂಬ ಪರಿಕಲ್ಪನೆಯಡಿ ಸಾಮಾಜಿಕ ಜಾಲತಾಣಗಳ ಸದ್ಬಳಕೆಯನ್ನು ಮಾಡಲಾಗುತ್ತದೆ. ಪಂಚಾಯಿತಿ ಮಟ್ಟದಲ್ಲಿ ಸಮಿತಿಗಳನ್ನು ಪುನರ್ರಚಿಸಲಾಗುತ್ತದೆ. ಪಕ್ಷದಲ್ಲಿ ನಿಷ್ಕ್ರಿಯರಾಗಿರುವವರನ್ನು ಸಕ್ರಿಯಗೊಳಿಸುವುದು, ದೂರ ಹೋದವರನ್ನು ಮತ್ತೆ ಪಕ್ಷಕ್ಕೆ ಕರೆತರುವುದರ ವಿಚಾರವಾಗಿ ಸಲಹೆಗಳು ಕಾರ್ಯರೂಪಕ್ಕೆ ಬರಲಿವೆ ಎಂದರು.

ವಿಧಾನಪರಿಷತ್ತು ವಿರೋಧ ಪಕ್ಷ ನಾಯಕ ಎಸ್.ಆರ್.ಪಾಟೀಲ್, ಮಾಜಿ ಸಭಾಪತಿ ವಿ.ಆರ್.ಸುದರ್ಶನ್, ಪಕ್ಷ ಪ್ರಮುಖರಾದ ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ಬಿ.ರಮಾನಾಥ ರೈ, ಕಳೆದ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಮಿಥುನ್ ರೈ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ