ಬಂಟ್ವಾಳ

ಹಲವು ಗೊಂದಲ, ಅವ್ಯವಸ್ಥೆಯೊಂದಿಗೆ ನಡೆದ ಗ್ರಾಪಂ ಚುನಾವಣೆ ಪ್ರಕ್ರಿಯೆ – ತಾಪಂ ಸಭೆಯಲ್ಲಿ ಸದಸ್ಯರ ಅಸಮಾಧಾನ

ತಾಲೂಕು ಪಂಚಾಯಿತಿ ಸಭೆಯಲ್ಲಿ ಮಾತನಾಡುತ್ತಿರುವ ಉಸ್ಮಾನ್ ಕರೋಪಾಡಿ

ಬಂಟ್ವಾಳ: ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ಹಲವು ಅವ್ಯವಸ್ಥೆಗಳಿಗೆ ಕಾರಣವಾಗಿದ್ದರೆ, ಇಡೀ ಪ್ರಕ್ರಿಯೆಯೇ ಗೊಂದಲಮಯವಾಗಿತ್ತು ಎಂದು ಗುರುವಾರ ನಡೆದ ಬಂಟ್ವಾಳ ತಾಲೂಕು ಪಂಚಾಯಿತಿ ಸಭೆಯಲ್ಲಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.

ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧ್ಯಕ್ಷತೆಯಲ್ಲಿ ತಾಪಂ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಅಕ್ಷರ ದಾಸೋಹ ಸಿಬ್ಬಂದಿ ಯಾರಾದರೂ ಚುನಾವಣೆಗೆ ನಿಂತು ಗೆದ್ದಿದ್ದರೆ, ಅವರನ್ನು ಕರ್ತವ್ಯದಿಂದ ಬಿಡುಗಡೆ ಮಾಡುವ ಕುರಿತು ಸರ್ಕಾರದ ಸುತ್ತೋಲೆ ಬಂದಿದೆ ಎಂದರು. ಇದಕ್ಕೆ ಆಕ್ಷೇಪ ಸಲ್ಲಿಸಿದ ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಎಸ್.ಮಹಮ್ಮದ್, ಅಕ್ಷರ ದಾಸೋಹ ಕೆಲಸ ಮಾಡುವುದು ಲಾಭದಾಯಕ ಹುದ್ದೆ ಅಲ್ಲ. ಚುನಾವಣೆಗೆ ನಿಲ್ಲುವ ವೇಳೆ ಇಂಥದ್ದೊಂದು ನಿಯಮವನ್ನು ತಿಳಿಸದೆ ಗೆದ್ದ ಮೇಲೆ ಈ ರೀತಿ ಮಾಡುವುದು ಸರಿಯಲ್ಲ ಎಂದರು ಸದಸ್ಯರಾದ ರಮೇಶ್ ಕುಡ್ಮೇರು, ಯಶವಂತ ಪೊಳಲಿ, ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ ಅವರೂ ದನಿಗೂಡಿಸಿದರು. ಇದೇ ವೇಳೆ ಚುನಾವಣಾ ಪ್ರಕ್ರಿಯೆಯೇ ಗೊಂದಲದ ಗೂಡಾಗಿರುವ ಕುರಿತು ಸದಸ್ಯರು ಪಕ್ಷಬೇಧ ಮರೆತು ದೂರಿದರು. ವಿಷಯ ಪ್ರಸ್ತಾಪಿಸಿದ ತಾಪಂ ಸದಸ್ಯ ಹೈದರ್ ಕೈರಂಗಳ, ಮತದಾನ ಪ್ರಕ್ರಿಯೆಯಿಂದ ಮತ ಎಣಿಕೆಯ ವಿಚಾರಗಳನ್ನು ಎಳೆಎಳೆಯಾಗಿ ವಿವರಿಸಿದರು ಅಧ್ಯಕ್ಷ ಚಂದ್ರಹಾಸ ಕರ್ಕೇರ ಮಾತನಾಡಿ, ಅಧಿಕಾರಿಗಳ ಬಳಿಯೂ ಸಮರ್ಪಕ ಮಾಹಿತಿ ಇರಲಿಲ್ಲ. ದಿನಕ್ಕೊಂದು ಸೂಚನೆಗಳನ್ನು ನೀಡುವ ಮೂಲಕ ಗೊಂದಲವನ್ನು ನಿರ್ಮಿಸಿದರು. ಮುಂದಿನ ಚುನಾವಣೆ ವೇಳೆ ಇದು ಪುನಾವರ್ತನೆ ಆಗದಿರಲಿ ಎಂದರು. ಉಪಾಧ್ಯಕ್ಷ ಅಬ್ಬಾಸ್ ಆಲಿ ಮಾತನಾಡಿ, ಮತ ಎಣಿಕೆಯ ಸಂದರ್ಭ ಪ್ರತಿಯೊಂದು ಪಂಚಾಯಿತಿ ಬೂತ್ ಗಳನ್ನು ಸರಿಯಾಗಿ ಗುರುತುಪಡಿಸಿ ವೇಗದ ಎಣಿಕೆಗೆ ವ್ಯವಸ್ಥೆಯನ್ನು ಕಲ್ಪಿಸಬಹುದಿತ್ತು ಎಂದರು.

ಬಂಟ್ವಾಳ ತಾಲೂಕಿನಲ್ಲಿ 30 ಸಕ್ರಿಯ ಕೊರೊನಾ ಪ್ರಕರಣಗಳಿವೆ. ಪ್ರಕರಣಗಳ ಸಂಖ್ಯೆ ಜಾಸ್ತಿ ಆಗಿದೆ. ಈ ಹಿನ್ನೆಲೆಯಲ್ಲಿ ಕಡ್ಡಾಯವಾಗಿ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ವೈದ್ಯಾಧಿಕಾರಿ ಹೇಳಿದರು. ಬಂಟ್ವಾಳ ತಾಲೂಕಿನಲ್ಲಿ ಹಕ್ಕಿಜ್ವರ ಬಾರದಂತೆ ಪ್ರತಿಬಂಧಕಗಳನ್ನು ಮಾಡಲಾಗಿದ್ದು, ಕೇರಳದಿಂದ ಕೋಳಿ ಸಾಗಾಟ ವಾಹನಗಳು ಬರುವಾಗ ತಪಾಸಣೆ ಮಾಡಲಾಗುತ್ತಿದೆ ಎಂದು ಬಂಟ್ವಾಳ ತಾಲೂಕು ಮುಖ್ಯ ಪಶುವೈದ್ಯಾಧಿಕಾರಿ ಡಾ. ಅವಿನಾಶ್ ಭಟ್ ತಿಳಿಸಿದರು. ಸಜಿಪಮುನ್ನೂರು ಗ್ರಾಮದ ಕಾಮಗಾರಿಯೊಂದು ವಿದ್ಯುತ್ ಬಿಲ್ ಪಾವತಿಯಾಗದ ಹಿನ್ನೆಲೆಯಲ್ಲಿ ಬಾಕಿ ಉಳಿದ ವಿಚಾರದ ಕುರಿತು ಸದಸ್ಯ ಸಂಜೀವ ಪೂಜಾರಿ ಪ್ರಸ್ತಾಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ