ಒಡಿಯೂರು ಶ್ರೀಗುರುದೇವಾನಂದ ಸ್ವಾಮೀಜಿಯವರ ಷಷ್ಟ್ಯಬ್ದ ಸಂಭ್ರಮ ತಾಲೂಕು ಸಮಿತಿ ಸಭೆ

ಬಂಟ್ವಾಳ:ಒಡಿಯುರು ಶ್ರೀ ಗುರುದೇವಾನಂದ ಸ್ವಾಮೀಜಿಯವರ ಷಷ್ಠ್ಯಬ್ದ ಸಂಭ್ರಮದ ಅಂಗವಾಗಿ ಬಂಟ್ವಾಳ ತಾಲೂಕು ಸಮಿತಿ ಘೋಷಣೆ, ಪದಗ್ರಹಣ ಹಾಗೂ ಪೂರ್ವಭಾವಿ ಸಭೆ ಬಿ.ಸಿ.ರೋಡಿನ ಹೊಟೇಲ್ ರಂಗೋಲಿ ಸಭಾಂಗಣದಲ್ಲಿ ಭಾನುವಾರ ನಡೆಯಿತು.

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿ ಕಾರ್ಯಕ್ರಮದಲ್ಲಿ  ಕೃಷಿ ಬದುಕಿಗೆ ಪೂರಕವಾಗಿರುವ ಗೋಸಮ್ಮೇಳನವನ್ನು ಬಂಟ್ವಾಳ ಘಟಕ ಆಯೋಜಿಸಿದ್ದು ಶ್ಲಾಘನಾರ್ಹ, ಧರ್ಮಸಂಸ್ಕೃತಿಯ ಅನಾವರಣ ದುಶ್ಚಟಮುಕ್ತ ಸಮಾಜ ನಿರ್ಮಾಣ ಆಗಲಿ, ಋಷಿ, ಕೃಷಿ ಸಂಸ್ಕೃತಿ ಬೆಳಯಲಿ ಎಂದರು. ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಸ್ವಾಮೀಜಿ ಒಡಿಯೂರು ಕ್ಷೇತ್ರದೊಂದಿಗಿನ ನಿಕಟ ಬಾಂಧವ್ಯವನ್ನು ಸ್ಮರಿಸಿ, ಕಾರ್ಯಕ್ರಮಕ್ಕೆ ಶುಭ ಕೋರಿದರು.ಷಷ್ಟ್ಯಬ್ದ ಸಂಭ್ರಮ ಸಮಿತಿಯ ಒಡಿಯೂರು ಕೇಂದ್ರ ಸಮಿತಿಯ ಗೌರವಾಧ್ಯಕ್ಷರಾದ ಸಾಧ್ವಿ ಮಾತಾನಂದಮಯೀ ಆಶೀರ್ಚನ ನೀಡಿದರು.

ಕೇಂದ್ರ ಸಮಿತಿ ಅಧ್ಯಕ್ಷ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಎಂ.,ಮೋಹನ ಆಳ್ವ ಮಾತನಾಡಿ, ಸಮಾರಂಭವನ್ನು ಸಮಾಜಮುಖಿಯನ್ನಾಗಿಸುವ ಕುರಿತು ತಿಳಿಸಿದರು. ಕೇಂದ್ರ ಸಮಿತಿ ಕಾರ್ಯಾಧ್ಯಕ್ಷ ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಪ್ರಧಾನ ಕಾರ್ಯದರ್ಶಿ ನವನೀತ ಶೆಟ್ಟಿ ಕದ್ರಿ, ಸಂಘಟನಾ ಕಾರ್ಯದರ್ಶಿ ಚಂದ್ರಹಾಸ ಡಿ.ಶೆಟ್ಟಿ ರಂಗೋಲಿ, ಕೋಶಾಧಿಕಾರಿ ಸುರೇಶ್ ರೈ ಮಕರಜ್ಯೋತಿ, ಬಂಟ್ವಾಳ ತಾಲೂಕು ಸಮಿತಿ ಗೌರವಾಧ್ಯಕ್ಷರಾಗಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಅಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ಕಾರ್ಯಾಧ್ಯಕ್ಷ ಡಾ. ತುಕಾರಾಮ ಪೂಜಾರಿ ಗೌರವ ಮಾರ್ಗದರ್ಶಕರಾದ ಮಾಜಿ ಸಚಿವ ಬಿ.ರಮಾನಾಥ ರೈ ಶುಭ ಹಾರೈಸಿದರು. ವಲಯ ಸಂಚಾಲಕರಾದ ಅಶೋಕ್ ಶೆಟ್ಟಿ ಸರಪಾಡಿ ಏಪ್ರಿಲ್ 4ರಂದು ಬಂಟ್ವಾಳದಲ್ಲಿ ಬೃಹತ್ ಗೋಸಮ್ಮೇಳನ ನಡೆಯುವ ಕುರಿತು ವಿವರ ನೀಡಿದರು. ಕೇಂದ್ರ ಸಮಿತಿ ಕಾರ್ಯಧ್ಯಕ್ಷ ಪದ್ಮನಾಭ ಕೊಟ್ಟಾರಿ ಸ್ವಾಗತಿಸಿದರು. ಸಂಯೋಜಕ ಎಚ್. ಕೆ. ನಯನಾಡು ಕಾರ್ಯಕ್ರಮ ನಿರೂಪಿಸಿದರು. ವಲಯ ಸಂಚಾಲಕ  ರಾಮದಾಸ ಬಂಟ್ವಾಳ ವಂದಿಸಿದರು.ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್ ಶೆಟ್ಟಿ ಮುಂಡ್ರೆಲ್ಗುತ್ತು,  ಯೋಜನಾ ಸಂಘಟಕ ಮಂಜು ವಿಟ್ಲ, ಕೋಶಾಧಿಕಾರಿ ಸುಭಾಶ್ಚಂದ್ರ ಜೈನ್, ಸಹಕೋಶಾಧಿಕಾರಿ ವಸಂತ ಶೆಟ್ಟಿ ಕೇದಿಗೆ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಒಡಿಯೂರು ಶ್ರೀಗುರುದೇವಾನಂದ ಸ್ವಾಮೀಜಿಯವರ ಷಷ್ಟ್ಯಬ್ದ ಸಂಭ್ರಮ ತಾಲೂಕು ಸಮಿತಿ ಸಭೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*