ಬಂಟ್ವಾಳ

ಬಂಟ್ವಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಬಿವಿಪಿಯಿಂದ ವಿವೇಕ ಸಂದೇಶ

ಬಂಟ್ವಾಳ: ಇಲ್ಲಿನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಘಟಕ  ಸಹಯೋಗದಲ್ಲಿ  ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾಮಾಜೆಯಲ್ಲಿ  ವಿವೇಕಾನಂದರ 158ನೇ ಜಯಂತಿ ಪ್ರಯುಕ್ತ  ಕಾಲೇಜು ಸಭಾಂಗಣದಲ್ಲಿ ವಿವೇಕಾ ಸಂದೇಶ 2021  ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಮಾತನಾಡಿದ ನ್ಯಾಯವಾದಿ ಪ್ರಸಾದ್ ಕುಮಾರ್ ರೈ, ಅಧ್ಯಯನ ಶೀಲ, ಕ್ರಾಂತಿಕಾರಿ ಸನ್ಯಾಸಿ ಸ್ವಾಮಿ ವಿವೇಕಾನಂದರು ಕೆಲವೇ  ವರ್ಷ ಬದುಕಿದ್ದರೂ ಕೂಡಾ, ಬಹಳಷ್ಟು ಚಿಂತನೆಗಳನ್ನು ಈ ದೇಶದ ಜನರಿಗೆ ನೀಡಿದ್ದಾರೆ ಎಂದರು  ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಿನ್ಸಿಪಾಲ್ ಪೊ. ಗಿರೀಶ್ ಭಟ್ ಅಜಕ್ಕಳ ಮಾತಾಡಿ ಇಂಥ ಕಾರ್ಯಕ್ರಮಗಳು ವಿವೇಕಾನಂದರನ್ನು ಮತ್ತಷ್ಟು ತಿಳಿಯಲು ಸಹಕಾರಿಯಾಗಿದೆ ಎಂದರು.  ಎಬಿವಿಪಿ ಬಂಟ್ವಾಳ ನಗರ ಕಾರ್ಯದರ್ಶಿ ನಾಗರಾಜ್ ಶೆಣೈ ಉಪಸ್ಥಿತರಿದ್ದರು. ವಿದ್ಯಾರ್ಥಿ ಪರಿಷತ್ ನ ವತಿಯಿಂದ ಹಮ್ಮಿಕೊಂಡಿದ್ದ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಪರಿಷತ್ ನ ಪ್ರಮುಖರು ಹಾಗೂ ಕಾಲೇಜಿನ ಅಧ್ಯಾಪಕರೂ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.  ಪ್ರಾಧ್ಯಾಪಕರಾದ ಶಶಿಕಲಾ ಸ್ವಾಗತಿಸಿ, ವಿದ್ಯಾರ್ಥಿನಿ ಭಿಂದು ವಂದಿಸಿದರು. ಸುಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ