ಬಂಟ್ವಾಳ

ಜೋಡುಮಾರ್ಗ ಜೇಸಿ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ

ಬಂಟ್ವಾಳ: ಇಲ್ಲಿನ ಜೇಸಿಐ ಜೋಡುಮಾರ್ಗ ನೇತ್ರಾವತಿಯ ನೂತನ ಅಧ್ಯಕ್ಷೆ ಶೈಲಜಾ ರಾಜೇಶ್ ಹಾಗೂ ಇತರ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಭಾನುವಾರ ಬಿ.ಸಿ.ರೋಡಿನ ಖಾಸಗಿ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್. ಸಮಾಜಮುಖಿ ಕಾರ್ಯಗಳಲ್ಲಿ ಜೇಸಿಐ ಮಾದರಿ ಸಂಘಟನೆಯಾಗಿ ಗುರುತಿಸಿಕೊಂಡಿದೆ ಎಂದರು.

ಬಿ.ಸಿ.ರೋಡಿನ ಹಿರಿಯ ನ್ಯಾಯವಾದಿ ಸತೀಶ್ ರಾವ್, ಸೇವ್‌ ಲೈಫ್ ಚ್ಯಾರಿಟೇಬಲ್ ಟ್ರಸ್ಟ್ ಸ್ಥಾಪಕ ಅರ್ಜುನ್ ಭಂಡಾರ್ಕರ್, ವಲಯ ಉಪಾಧ್ಯಕ್ಷ ಶರತ್‌ಕುಮಾರ್ ಶುಭ ಹಾರೈಸಿದರು. ಜೇಸಿ ವಲಯಾಧ್ಯಕ್ಷೆ ಸೌಜನ್ಯ ಹೆಗ್ಡೆ ಪ್ರತಿಜ್ಞಾ ವಿಧಿ ಬೋಧಿಸಿದರು. ಪೂವಾಧ್ಯಕ್ಷ ಅಹಮ್ಮದ್ ಮುಸ್ತಾಫ ಅಧ್ಯಕ್ಷರನ್ನು ಪರಿಚಯಿಸಿದರು. ನಿಕಟಪೂರ್ವ ಅಧ್ಯಕ್ಷ ಶ್ರೀನಿಧಿ ಭಟ್ ವರದಿ ಮಂಡಿಸಿದರು. ಕಾರ್ಯದರ್ಶಿ ಕಿಶನ್ ಎನ್.ರಾವ್, ಕೋಶಾಧಿಕಾರಿ ಹರಿಪ್ರಸಾದ್ ಕುಲಾಲ್ ಉಪಸ್ಥಿತರಿದ್ದರು. ನೂತನ ಸದಸ್ಯರು ಹಾಗೂ ಪದಾಽಕಾರಿಗಳಿಗೆ ಪ್ರಮಾಣ ವಚನ ಬೋಧಿಸಲಾಯಿತು. ಕಳೆದ ಸಾಲಿನ ಐಪಿಪಿ ಹರ್ಷರಾಜ್ ಅವರನ್ನು ಗೌರವಿಸಲಾಯಿತು. ನೂತನ ಕಾರ್ಯದರ್ಶಿ ಮಲ್ಲಿಕಾ ಆಳ್ವ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ