ಬಂಟ್ವಾಳ

ಬಲಾತ್ಕಾರದ ಸಾಲ ವಸೂಲಿ ವಿರುದ್ಧ ಬಿ.ಸಿ.ರೋಡಿನಲ್ಲಿ ಪ್ರತಿಭಟನೆ

ಬಂಟ್ವಾಳ: ಕರ್ನಾಟಕ ರಾಜ್ಯ ಋಣಮುಕ್ತಕ್ಕಾಗಿ ಹೋರಾಟ ಸಮಿತಿ, ಸಿ.ಐ.ಟಿ.ಯು, ಜನವಾದಿ ಮಹಿಳಾ ಸಂಘಟನೆ ವತಿಯಿಂದ ಖಾಸಗಿ ಫೈನಾನ್ಸ್ ಗಳು ಬಲಾತ್ಕಾರವಾಗಿ ಸಾಲ ವಸೂಲಿ ಮತ್ತು ಕಿರುಕುಳ ನಿಲ್ಲಿಸಲು ಒತ್ತಾಯಿಸಿ ಪ್ರತಿಭಟನೆ ಬಿ.ಸಿ.ರೋಡಿನ ಮಿನಿ ವಿಧಾನಸೌಧ ಮುಂಭಾಗ ಬುಧವಾರ ನಡೆಯಿತು.

ಸಮಿತಿ ರಾಜ್ಯ ಕಾರ್ಯದರ್ಶಿ ಶಿವಕುಮಾರ್, ಪ್ರಮುಖರಾದ ರಾಮಣ್ಣ ವಿಟ್ಲ, ಜಯಂತಿ ಶೆಟ್ಟಿ, ಶೋಭಾ ಕೊಯ್ಲ, ಮಹಮ್ಮದ್ ಇಕ್ಬಾಲ್ ಹಳೆಮನೆ, ಶೇಖರ ಲಾಯ್ಲ, ಮಹಮ್ಮದ್ ಅಲ್ತಾಫ್ ತುಂಬೆ ಈ ಸಂದರ್ಭ ಇದ್ದರು.

ಈ ಸಂದರ್ಭ ಮಾತನಾಡಿದ ಪ್ರತಿಭಟನಾಕಾರರು ಹಲವು ಖಾಸಗಿ ಫೈನಾನ್ಸ್ ಗಳಿಂದ ಹಳ್ಳಿಯ ಮನೆ ಮನೆಗಳಿಗೆ ತೆರಳಿ ಬಡ ಮಹಿಳೆಯರನ್ನು ಗುರಿಯಾಗಿರಿಸಿ ದುಬಾರಿ ಬಡ್ಡಿಯ ಸಾಲ ನೀಡಿ ಸುಲಿಗೆ ಮಾಡುತ್ತಾರೆ ಎಂದು ಆರೋಪಿಸಿದರು. ಕಾನೂನುಬಾಹಿರವಾಗಿ ನೀಡಿದ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ದೌರ್ಜನ್ಯ ಎಸಗುವ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಮನೆಗೆ ಬಂದು ಸಾಲ ವಸೂಲಾತಿ ಮಾಡುವುದನ್ನು ನಿಲ್ಲಿಸಬೇಕು. ರಾಷ್ಟ್ರೀಕೃತ ಬ್ಯಾಂಕುಗಳಿಂದ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಆಧಾರ್ ಕಾರ್ಡ್ ಆಧಾರದಲ್ಲಿ ಸಾಲ ನೀಡಬೇಕು, ಸಾಲ ವಸೂಲಾತಿ ವ್ಯಕ್ತಿಗಳಿಂದ ರಕ್ಷಣೆ ನೀಡಬೇಕು ಎಂದು ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ