ಬಂಟ್ವಾಳ

ಮತ್ತೆ ಆತಂಕ ಸೃಷ್ಟಿಸಿದ ಗ್ಯಾಸ್ ಟ್ಯಾಂಕರ್: ಸೂರಿಕುಮೇರಿಯಲ್ಲಿ ಪಲ್ಟಿ – ಹೆದ್ದಾರಿ ಸಂಚಾರ ಬ್ಲಾಕ್, ತೆರವು ಕಾರ್ಯ ಪ್ರಗತಿಯಲ್ಲಿ

ಬಂಟ್ವಾಳ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಮಸೀದಿ ಮುಂಭಾಗ ಮಂಗಳವಾರ ಬೆಳಗ್ಗೆ ಸುಮಾರು 3ರಿಂದ 4 ಗಂಟೆ ಮಧ್ಯೆ ಗ್ಯಾಸ್ ಟ್ಯಾಂಕರ್ ಒಂದು ರಸ್ತೆ ಮಧ್ಯಕ್ಕೇ ಉರುಳಿಬಿದ್ದ ಪರಿಣಾಮ ಸ್ಥಳದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಘಟನೆಯಲ್ಲಿ ಗ್ಯಾಸ್ ಲೀಕ್ ಆಗದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ. ಆದರೂ ಮುಂಜಾಗರೂಕತಾ ಕ್ರಮವಾಗಿ ರಸ್ತೆ ಸಂಚಾರವನ್ನು ಬಂದ್ ಮಾಡಲಾಗಿದೆ. ಈಗಾಗಲೇ ತಾಂತ್ರಿಕ ತಂಡ ಸ್ಥಳಕ್ಕೆ ಆಗಮಿಸಿದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳುವುದರ ಜೊತೆಗೆ ಸುರಕ್ಷಿತವಾಗಿ ಟ್ಯಾಂಕರ್ ಅನ್ನು ಲಿಫ್ಟ್ ಮಾಡುವ ಕಾರ್ಯ ಪ್ರಗತಿಯಲ್ಲಿದೆ. ವಿಟ್ಲ ಪೊಲೀಸ್ ಎಸ್.ಐ. ವಿನೋದ್ ರೆಡ್ಡಿ, ಬಂಟ್ವಾಳ ಟ್ರಾಫಿಕ್ ಎಸ್ಸೈ ರಾಜೇಶ್ ಕೆ.ವಿ. ಮತ್ತು ವಿಟ್ಲ, ಬಂಟ್ವಾಳ ಟ್ರಾಫಿಕ್ ಠಾಣೆಯ ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿದ್ದು ಬದಲಿ ರಸ್ತೆಯ ಸೂಚನೆಗಳನ್ನು ನೀಡುತ್ತಿದ್ದಾರೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ.

ಮುಂಜಾಗ್ರತಾ ಕ್ರಮವಾಗಿ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿಯಿಂದ ಕಲ್ಲಡ್ಕ ಭಾಗದಲ್ಲಿ ಎಲ್ಲಾ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಮಂಗಳೂರು ಕಡೆಯಿಂದ ಬರುವ ವಾಹನವನ್ನು ಕಲ್ಲಡ್ಕ, ವಿಟ್ಲ ರಸ್ತೆ ಮೂಲಕ ಹಾಗೂ ಬೆಂಗಳೂರು, ಉಪ್ಪಿನಂಗಡಿ ಕಡೆಯಿಂದ ಬರುವ ವಾಹನಗಳನ್ನು ಮಾಣಿ, ಬುಡೋಳಿ, ಕಬಕ ಮೂಲಕ ಬದಲಿ ರಸ್ತೆಯ ವ್ಯವಸ್ಥೆ ಮಾಡಲಾಗಿದೆ.

ವಿವಿಧ ಭಾಗದಲ್ಲಿ ಬುಡೋಳಿ ಯೂತ್ ಫೆಡರೇಶನ್,ಸೂರಿಕುಮೇರು ಬದ್ರಿಯಾ ಯಂಗ್ ಮೆನ್ಸ್  ಸದಸ್ಯರು, ಸಾರ್ವಜನಿಕರು ವಾಹನ ಸಂಚಾರವನ್ನು ನಿಯಂತ್ರಿಸುತ್ತಿದ್ದಾರೆ. ಅನಿಲ ಸೋರಿಕೆಯಾಗದ ಹಿನ್ನೆಲೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ. ಇನ್ನೂ ಮಸೀದಿ ಧ್ವನಿ ವರ್ಧಕದ ಮೂಲಕ ಸುತ್ತಮುತ್ತಲಿನ ಭಾಗದ ಮನೆಗಳಲ್ಲಿ ಬೆಂಕಿ ಬಳಸದಂತೆ ಸೂಚನೆ ನೀಡಲಾಗಿದೆ.

ಜಾಹೀರಾತು

ಹಿಂದೆಯೂ ಆಗಿತ್ತು: ಪೆರ್ನೆಯಲ್ಲಿ ಕೆಲ ವರ್ಷಗಳ ಹಿಂದೆ ಅನಿಲ ಟ್ಯಾಂಕರ್ ಅಪಘಾತದಲ್ಲಿ ಜೀವಹಾನಿ ಸಂಭವಿಸಿದ್ದರೆ, 2016ರಲದ್ಲಿ ಸೂರಿಕುಮೇರುವಿನಲ್ಲಿ ಟ್ಯಾಂಕರ್ ಮಗುಚಿ ದಿನವಿಡೀ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸ್ಥಳೀಯರು ಭೀತರಾಗಿದ್ದರು.

ಸ್ಥಳೀಯರ ಆತಂಕ, ಸೂಚನೆ ಪಾಲನೆ ಆಗ್ತಾ ಇಲ್ಲ ಹೆದ್ದಾರಿ ಅಪಘಾತ ಸಂಭವಿಸಿದ ವೇಳೆ ಅಂದಿನ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಆದೇಶ ಹೊರಡಿಸಿ, ಗ್ಯಾಸ್ ಟ್ಯಾಂಕರ್ ರಾತ್ರಿ ಸಾಗುವ ವಿಚಾರದ ಕುರಿತು ಸೂಚನೆಗಳನ್ನು ಹೊರಡಿಸಿದ್ದರು. ಆದರೆ ನಿರಾತಂಕವಾಗಿ ಮಂಗಳೂರು ಬೆಂಗಳೂರು ಹೆದ್ದಾರಿಯಲ್ಲಿ ಭಾರಿ ಗಾತ್ರದ ಅನಿಲ ಟ್ಯಾಂಕರುಗಳು ಸಾಗುತ್ತಿದ್ದು, ಸಮೀಪದ ಮನೆಯವರಿಗೆ ನಿತ್ಯ ಆತಂಕಕ್ಕೆ ಕಾರಣವಾಗಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ