ಸತತ ಕಾರ್ಯಾಚರಣೆ ಬಳಿಕ ಬದಿಗೆ ಸರಿದ ಗ್ಯಾಸ್ ಟ್ಯಾಂಕರ್

ಬಂಟ್ವಾಳ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಎಂಬಲ್ಲಿ ಮಸೀದಿ ಮುಂಭಾಗ ಮಂಗಳವಾರ ಬೆಳಗ್ಗೆ ಗ್ಯಾಸ್ ಟ್ಯಾಂಕರ್ ಒಂದು ಮಗುಚಿಬಿದ್ದ ಪರಿಣಾಮ ಬೆಳಗ್ಗೆ 4 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಕಲ್ಲಡ್ಕ ಮತ್ತು ಮಾಣಿ ಮಧ್ಯೆ ವಾಹನ ಸಂಚಾರ ಸ್ಥಗಿತಗೊಂಡಿತು. ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಲೀ, ಗ್ಯಾಸ್ ಸೋರಿಕೆಯಾಗಲೀ ನಡೆಯದಿದ್ದ ಕಾರಣ ಭಾರೀ ಅನಾಹುತವೊಂದು ತಪ್ಪಿಹೋಯಿತು. ಬೆಳಗ್ಗೆ ಸುಮಾರು 4 ಗಂಟೆ ವೇಳೆಗೆ ಈ ಅಪಘಾತ ಸಂಭವಿಸಿದೆ. ವಿಟ್ಲ ಎಸ್.ಐ.ವಿನೋದ್ ರೆಡ್ಡಿ, ಬಂಟ್ವಾಳ ಟ್ರಾಫಿಕ್ ಎಸ್.ಐ. ರಾಜೇಶ್ ಸಹಿತ ಬಂಟ್ವಾಳ ಪೊಲೀಸರು ಸಂಚಾರ ನಿಯಂತ್ರಣದೊಂದಿಗೆ ತೆರವು ಕಾರ್ಯಾಚರಣೆಯನ್ನು ಆರಂಭಿಸಿದರು. ಮಧ್ಯಾಹ್ನ 2 ಗಂಟೆಯ ವೇಳೆಗೆ ಕ್ರೇನ್ ಮೂಲಕ ಮಗುಚಿದ ಟ್ಯಾಂಕರ್ ಅನ್ನು ಮೊದಲಿನಂತೆ ಮಾಡಲಾಯಿತು. ಬಳಿಕ ಅದನ್ನು ರಸ್ತೆಯಿಂದ ಬೇರೆಡೆಗೆ ಸರಿಸಲಾಯಿತು. ಅಷ್ಟು ಹೊತ್ತಿಗಾಗಲೇ ವಾಹನಗಳು ಎರಡೂ ಬದಿ ಸಾಲುಗಟ್ಟಿ ನಿಂತಿದ್ದವು. ಟ್ಯಾಂಕರ್ ಅಪಘಾತ ಸ್ಥಳಕ್ಕೆ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್ ಆರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂದರ್ಭ,  ವಿಟ್ಲ ಕಂದಾಯ ನಿರೀಕ್ಷಕ ದಿವಾಕರ್ ಉಪಸ್ಥಿತರಿದ್ದರು. ಜಿಲ್ಲಾ ಅಗ್ನಿಶಾಮಕ ದಳ ಅಧಿಕಾರಿ ಭರತ್ ಕುಮಾರ್, ಬಂಟ್ವಾಳ ಅಗ್ನಿಶಾಮಕ ಠಾಣಾಧಿಕಾರಿ ಯೋಗೀಶ್, ವಿಟ್ಲ ಎಸೈ ವಿನೋದ್ ರೆಡ್ಡಿ, ಮೆಲ್ಕಾರ್ ಟ್ರಾಪಿಕ್ ಠಾಣಾ ಎಸೈ ರಾಜೇಶ್ ಕೆ.ವಿ, ಪುತ್ತೂರು ಅಗ್ನಿಶಾಮಕದಳ, ಉಪ್ಪಿನಂಗಡಿಯ ಕ್ರೈನ್ ತಂಡದ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದು, ಮಧ್ಯಾಹ್ನ ಎರಡು ಗಂಟೆ ವೇಳೆ ಹೆದ್ದಾರಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಯಿತು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸತತ ಕಾರ್ಯಾಚರಣೆ ಬಳಿಕ ಬದಿಗೆ ಸರಿದ ಗ್ಯಾಸ್ ಟ್ಯಾಂಕರ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*