ಕೊಲೆ ಪ್ರಕರಣವಾದ ಅಸಹಜ ಸಾವು: ವೃದ್ಧೆಯ ಹತ್ಯೆ ಮಾಡಿದ ಆರೋಪದಲ್ಲಿ ಮೂವರು ಅಂದರ್

ಬಂಟ್ವಾಳ: ವೃದ್ಧೆಯೊಬ್ಬರು ಅಸಹಜವಾಗಿ ಸಾವನ್ನಪ್ಪಿದ ಪ್ರಕರಣವೊಂದು ಹತ್ಯಾ ಪ್ರಕರಣವಾಗಿ ಬದಲಾದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ಅಮ್ಮುಂಜೆ ಎಂಬಲ್ಲಿ ನಡೆದಿದೆ.

ಅಮ್ಮುಂಜೆ ಗ್ರಾಮದ ಬೆನೆಡಿಕ್ಟ ಕಾರ್ಲೊ (72) ಸಾವನ್ನಪ್ಪಿದವರು. ಇವರನ್ನು ಹತ್ಯೆ ಮಾಡಿದ ಆರೋಪದಲ್ಲಿ ವೃದ್ಧೆಯನ್ನು ನೋಡಿಕೊಳ್ಳಲು ಬರುತ್ತಿದ್ದ ಅಮ್ಟಾಡಿ ನಿವಾಸಿ ಎಲ್ಮಾ ಪ್ರಶ್ಚಿತಾ ಬರೆಟ್ಟೊ (25), ನರಿಕೊಂಬು ನಿವಾಸಿಗಳಾದ ಸತೀಶ್ ಮತ್ತು ಚರಣ್ ಅವರನ್ನು ಬಂಧಿಸಲಾಗಿದ್ದು, ಅವರಿಂದ 98 ಗ್ರಾಂ ಬಂಗಾರವನ್ನು ವಶಪಡಿಸಿಕೊಳ್ಳಲಾಗಿದೆ. ಬಂಟ್ವಾಳ ಉಪವಿಭಾಗದ ಪೊಲೀಸ್‌ ಉಪಾಧೀಕ್ಷಕ ವೈಲೆಂಟೈನ್‌ ಡಿʻಸೋಜಾ ಮಾರ್ಗದರ್ಶನದಲ್ಲಿ ಬಂಟ್ವಾಳ ವೃತ್ತ ನಿರೀಕ್ಷಕರಾದ ಟಿ.ಡಿ, ನಾಗರಾಜ್‌ ನೇತೃತ್ವದಲ್ಲಿ ಬಂಟ್ವಾಳ ಗ್ರಾಮಾಂತರ ಠಾಣಾ ಪಿ.ಎಸ್.ಐ ಪ್ರಸನ್ನ. ಎಂ.ಎಸ್, ವಿಟ್ಲ ಠಾಣಾ ಪಿ.ಎಸ್.ಐ ವಿನೋದ್‌ ರೆಡ್ಡಿ, ಹಾಗೂ ಎಚ್.ಸಿಗಳಾದ ಗಿರೀಶ್‌, ಸುರೇಶ್‌, ಜನಾರ್ದನ, ಪ್ರಮೀಳಾ, ಕಿರಣ್‌, ಪಿ.ಸಿಗಳಾದ ನಝೀರ್‌, ಪುನೀತ್‌, ಮನೋಜ್‌, ಪ್ರಸನ್ನ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಪತ್ತೆಹಚ್ಚಿ ವಶಕ್ಕೆ ಪಡೆದು, ವಿಚಾರಣೆ ನಡೆಸಿದಾಗ ಪ್ರಕರಣ ಬಯಲಿಗೆ ಬಂದಿದೆ.

ಘಟನೆ ವಿವರ: ಜನವರಿ 26ರಂದು ಬಂಟ್ವಾಳ ತಾಲೂಕು ಅಮ್ಮುಂಜೆ ಗ್ರಾಮದಲ್ಲಿ ಬೆನೆಡಿಕ್ಟ್‌ ಕಾರ್ಲೋ (72) ಎಂಬ ಮಹಿಳೆಯ ಅಸಹಜ ಸಾವು ಪ್ರಕರಣ ವರದಿಯಾಗುತ್ತದೆ. ಫೆ.2ರಂದು ಮೃತ ಮಹಿಳೆಯ ಪುತ್ರ ಠಾಣೆಗೆ ಆಗಮಿಸಿ, ತಮ್ಮ ತಾಯಿಯ ಸಾವಿನ ಬಗ್ಗೆ ಅನುಮಾನವಿದೆಎಂದು ದೂರು ನೀಡಿದ ಮೇರೆಗೆ ಹಲವರನ್ನು ವಿಚಾರಿಸಲಾಯಿತು. ಈ ಸಂದರ್ಭ ಕೆಲಸದಾಕೆಯನ್ನು ಹೆಚ್ಚಿನ ವಿಚಾರಣೆ ನಡೆಸಿದಾಗ ತನಿಖೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಎಲ್ಮಾ ಪ್ರಶ್ಚಿತ ಬರೆಟ್ಟೋ ,ವೃದ್ಧೆ ಬಳಿ ಇದ್ದ ಬಂಗಾರವನ್ನು ದೋಚಲು ಈ ಸ್ಕೆಚ್ ಹಾಕಿದ್ದಾಳೆ. ಈಕೆ ತನ್ನ ಸ್ನೇಹಿತರಾದ ನರಿಕೊಂಬು ನಿವಾಸಿಯಾದ ಸತೀಶ ಮತ್ತು ಚರಣ್‌ ರವರೊಂದಿಗೆ ಸೇರಿಕೊಂಡು ಜನವರಿ 25ರಂದು ಕಾರ್ಲೋ ರವರ ಮನೆಯಲ್ಲಿ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ತನಿಖೆಯಲ್ಲಿ ತಿಳಿದುಬಂದಿದೆ. ತಾನು ಕೆಲಸ ಮಾಡಲು ಬರುತ್ತಿದ್ದ ಮನೆಗೇ ಕನ್ನ ಹಾಕಿ, ಮನೆ ಮಾಲೀಕರನ್ನೇ ಹತ್ಯೆ ಮಾಡಿ ವೃದ್ಧೆ ಸಾವನ್ನಪ್ಪಿರುವ ವೇಳೆ ಏನೂ ಗೊತ್ತಿಲ್ಲದಂತೆ ಈಕೆ ಕುಳಿತಿದ್ದಳು. ಇದೀಗ ಪೊಲೀಸ್ ತನಿಖೆ ವೇಳೆ ವಿಷಯ ಬಹಿರಂಗವಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕೊಲೆ ಪ್ರಕರಣವಾದ ಅಸಹಜ ಸಾವು: ವೃದ್ಧೆಯ ಹತ್ಯೆ ಮಾಡಿದ ಆರೋಪದಲ್ಲಿ ಮೂವರು ಅಂದರ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*