ಸರಣಿ ಕಳವು ಆರೋಪಿಗಳು ಇವರು: ಬಂಟ್ವಾಳ ಪೊಲೀಸರು ಹೆಡೆಮುರಿ ಕಟ್ಟಿದರು

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣಗಳ ಐವರು ಆರೋಪಿಗಳನ್ನು ಬಂಟ್ವಾಳ ವೃತ್ತ ನಿರೀಕ್ಷಕ ಟಿ ಡಿ ನಾಗರಾಜ ರವರ ವಿಶೇಷ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಆರೋಪಿಗಳಾದ ಅರ್ಕುಳ ವಳಚ್ಚಿಳ್ ನಿವಾಸಿ  ಅಮ್ಮಿ ಯಾನೆ ಅಮರುದ್ದಿನ್,  ಮಂಗಳೂರು ಕಣ್ಣೂರು ನಿವಾಸಿಗಳಾದ ಮಹಮದ್ ಯೂನಸ್  ಮತ್ತು .ಹಫೀಸ್ ಯಾನೆ ಅಪ್ಪಿ,ಸಜಿಪಮೂಡ ಗ್ರಾಮದ ಪೆರ್ವಾ ನಿವಾಸಿ ಫಾರೂಕ್ ಯಾನೆ ಉಮ್ಮರ್ ಫಾರೂಕ್ ಯಾನೆ ಕಳ್ಳ ಫಾರೂಕ್  ಹಾಗೂ ಮಂಗಳೂರು ಬೆಂಗ್ರೇ ನಿವಾಸಿ ಮಹಮ್ಮದ್ ಸಫ್ವಾನ್ ಯಾನೆ ಸರತ್ ಯಾನೆ ಕರೂ ಯಾನೆ ಸರೂ ಯಾನೆ ಸಫ್ವಾನ್  ಎಂಬವರುಗಳನ್ನು ಬಂಧಿಸಲಾಗಿದೆ.,

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ವಿಟ್ಲ, ಉಪ್ಪಿನಂಗಡಿ, ಪುತ್ತೂರು ಭಾಗದಲ್ಲಿ ಸರಣಿ ಕಳ್ಳತನಗಳು ಹೆಚ್ಚಿದ ಹಿನ್ನಲೆಯಲ್ಲಿ ಬಂಟ್ವಾಳ ವೃತ್ತ ನಿರೀಕ್ಷಕ ಟಿ ಡಿ ನಾಗರಾಜ್ ರವರ ನೇತೃತ್ವದಲ್ಲಿ ಬಂಟ್ವಾಳ ನಗರ ಠಾಣಾ ಉಪನಿರೀಕ್ಷಕರಾದ ಅವಿನಾಶ್ ಮತ್ತು ಕಲೈಮಾರ್, ಬಂಟ್ವಾಳ ಗ್ರಾಮಾಂತರ ಠಾಣಾ ಉಪನಿರೀಕ್ಷಕರಾದ ಪ್ರಸನ್ನ ಮತ್ತು ಸಂಜೀವ್,  ವಿಟ್ಲ ಠಾಣಾ ಉಪನಿರೀಕ್ಷಕರಾದ ವಿನೋದ್ ರೆಡ್ಡಿ,  ಉಪ್ಪಿನಂಗಡಿ ಠಾಣಾ ಉಪನಿರೀಕ್ಷಕರಾದ ಈರಯ್ಯ , ಡಿಸಿಐಬಿ ಮತ್ತು ಠಾಣಾ ಸಿಬ್ಬಂದಿಗಳನ್ನೊಳಗೊಂಡ ವಿಶೇಷ ತನಿಖಾ ತಂಡ ರಚಿಸಲಾಗಿತ್ತು. ಬಂಟ್ವಾಳ ಸಹಾಯಕ ಅಧೀಕ್ಷಕ ವೆಲೆಂಟನ್ ಡಿಸೋಜ್ ಮಾರ್ಗದರ್ಶನದಲ್ಲಿ ತನಿಖೆ ನಡೆಸಿ ಕೂಲಂಕುಷವಾಗಿ ವಿಚಾರಿಸಿದಾಗ ಆರೋಪಿಗಳು ನಡೆಸಿದ ಹಲವು ಕೃತ್ಯಗಳು ಬೆಳಕಿಗೆ ಬಂದಿವೆ.

ಜಾಹೀರಾತು

ಮೇಲ್ಕಾರ್ ಬಳಿಯ ಸುರಭಿ ಬಾರ್ ನಲ್ಲಿ ಕಳ್ಳತನ, ನರಿಕೊಂಬು ದೇವಸ್ಥಾನ ಹುಂಡಿ ಕಳವು, ಮೆಲ್ಕಾರ್ ಕಾಲೇಜ್ ನಲ್ಲಿ ಕಳ್ಳತನ, ವಿಟ್ಲದಲ್ಲಿ ಪೆಟ್ರೋಲ್ ಬಂಕ್ ಕಳ್ಳತನ ಪ್ರಕರಣ. ಅಮ್ಟೂರು ಚರ್ಚ್ ನಲ್ಲಿ ಕಳ್ಳತನ, ಬಿ.ಸಿ.ರೋಡಿನ ಚಂಡಿಕಾ ಪರಮೇಶ್ವರಿ ದೇವಸ್ಥಾನ ಹುಂಡಿ ಕಳ್ಳತನ, ಶಾಲೆಗಳಲ್ಲಿ ಕಳ್ಳತನ, ಪರ್ಲ ಚರ್ಚ್ ಕಳ್ಳತನ, ಬಿ.ಸಿ.ರೋಡಿನ ರಾಜೇಶ್ ಬಾರ್ ನಲ್ಲಿ ಕಳ್ಳತನ, ಮಂಗಳೂರಿನಲ್ಲಿ ಪಲ್ಸರ್ ಬೈಕ್ ಕಳ್ಳತನ, ಉಪ್ಪಿನಂಗಡಿಯ ಉಲ್ಲಾಸ್ ಬಾರ್ ನಲ್ಲಿ ಕಳ್ಳತನ, ಕೇರಳ ರಾಜ್ಯದ ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿ ಅಲ್ಲಿ ಪಲ್ಸರ್ ಬೈಕ್ ಕಳ್ಳತನ ಸೇರಿ ಸೇರಿ ಒಟ್ಟು 13 ಪ್ರಕರಣಗಳಲ್ಲಿ ಭಾಗಿಯಾಗಿರುವುದು ತಿಳಿದುಬಂದಿರುತ್ತದೆ. ಆರೋಪಿಗಳಿಂದ 3 ಬೈಕ್ ,ಒಂದು ಮೊಬೈಲ್, 6 ಡಿವಿಆರ್ ಸೆಟ್ ಬಾಕ್ಸ್ , 14 ಜೀವಂತ ಗುಂಡು, 2 ಮಾನಿಟರ್, ಬ್ರಾಡ್ ಬ್ಯಾಂಡ್ ಒ ಎಲ್ ಟಿ ಬಾಕ್ಸ್, 40,000 ಸಾವಿರ ನಗದು ಹಣ ಸೇರಿದಂತೆ ಒಟ್ಟು ಅಂದಾಜು ರೂ 4,80,000 ಮೌಲ್ಯದ ಸೊತ್ತುಗಳನ್ನು ವಶಪಡಿಸಲಾಗಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸರಣಿ ಕಳವು ಆರೋಪಿಗಳು ಇವರು: ಬಂಟ್ವಾಳ ಪೊಲೀಸರು ಹೆಡೆಮುರಿ ಕಟ್ಟಿದರು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*