ಸಮಾನ ಮನಸ್ಕ ಸಂಘಟನೆಗಳ ಸಭೆ, ಬ್ರಹ್ಮರಕೂಟ್ಲುವಿನಲ್ಲಿ ಹೆದ್ದಾರಿ ತಡೆಗೆ ನಿರ್ಧಾರ

ಬಂಟ್ವಾಳ: ಇಲ್ಲಿನ ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಬಂಟ್ವಾಳ ತಾಲೂಕಿನ ವಿವಿಧ ಸಾಮಾಜಿಕ ಸಂಘಟನೆಗಳ ಬೆಂಬಲದೊಂದಿಗೆ ಬ್ತಹ್ಮರಕೂಟ್ಲು ಟೋಲ್ ಗೇಟ್ ಶಾಶ್ವತವಾಗಿ ತೆರವುಗೊಳಿಸುವಂತೆ ಒತ್ತಾಯಿಸಿ ಬೃಹತ್ ಹೆದ್ದಾರಿ ತಡೆಯನ್ನು ಮಾ.9ರಂದು ನಡೆಸಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಅಧ್ಯಕ್ಷ ಪ್ರಭಾಕರ ದೈವಗುಡ್ಡೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಮಾಡಲಾಯಿತು. ಈ ಸಂದರ್ಭ ವಕೀಲರ ಸಂಘ ಅಧ್ಯಕ್ಷ ದೀಪಕ್ ಕುಮಾರ್ ಜೈನ್ ಮತ್ತು ಹಿರಿಯ ವಕೀಲ ಉಮೇಶ್ ಕುಮಾರ್ ವೈ ಮಾತನಾಡಿ ನಿಟ್ಟಿನಲ್ಲಿ ಹೋರಾಟವನ್ನು ಪರಿಣಾಮಕಾರಿಯಾಗಿ ನಡೆಸಲು ತೀರ್ಮಾನಿಸಬೇಕಾಗಿದೆ ಜೊತೆಜೊತೆಗೆ ಕಾನೂನಾತ್ಮಕವಾಗಿಯೂ ಹೋರಾಟ ನಡೆಸಬೇಕಾಗಿದೆ. ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ರಿಟ್ ಪಿಟಿಶನ್ ಹಾಕಬೇಕಿದೆ. ಅದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದರು. ಸಮಾನ ಮನಸ್ಕ ಸಂಘಟನೆಯು ರಾಜಕೀಯೇತರ ಸಂಘಟನೆಯಾಗಿ ಕಾರ್‍ಯಾಚರಿಸುತ್ತಿದೆ. ಸಾಮಾಜಿಕ ಹೋರಾಟಗಳನ್ನು ಬೆಂಬಲಿಸಲು ಇಚ್ಚಿಸುವ ಯಾವುದೇ ಸಂಘಟನೆಗಳು ನಮ್ಮ ಸೇರಿಕೊಳ್ಳಬಹುದು ಎಂದು ಸಮಿತಿಯ ಅಧ್ಯಕ್ಷರು ಹೇಳಿದರು. ದ.ಕ ಜಿಲ್ಲಾ ಗ್ಯಾರೇಜು ಮಾಲಕರ ಸಂಘದ ಅಧ್ಯಕ್ಷ ಅಣ್ಣು ಪೂಜಾರಿ, ಕಾರ್‍ಯದರ್ಶಿ ಸುರೇಶ್ ಕುಲಾಲ್, ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಅಬ್ಬಾಸ್ ಆಲಿ, ವಿವಿಧ ವಾಹನ ಚಾಲಕ, ಮಾಲಕ ಸಂಘಟನೆಗಳ ಮುಖಂಡರುಗಳು ಉಪಸ್ಥಿತರಿದ್ದರು. ಅಂದು ಬೆಳಿಗ್ಗೆ ೧೦ ಗಂಟೆಗೆ ಹೆದ್ದಾರಿ ತಡೆ ಶಾಂತಿಯುತವಾಗಿ ನಡೆಯಲಿದೆ. ಈ ನ್ಯಾಯ ಪರ ಹೋರಾಟದಲ್ಲಿ ಎಲ್ಲರೂ ಕೈಜೋಡಿಸುವಂತೆ ಸಮಿತಿ ಅಧ್ಯಕ್ಷ ಬಿ.ಎಂ.ಪ್ರಭಾಕರ ದೈವಗುಡ್ಡೆ ಹಾಗೂ ಕಾರ್ಯದರ್ಶಿ ಬಿ.ಶೇಖರ್ ವಿನಂತಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸಮಾನ ಮನಸ್ಕ ಸಂಘಟನೆಗಳ ಸಭೆ, ಬ್ರಹ್ಮರಕೂಟ್ಲುವಿನಲ್ಲಿ ಹೆದ್ದಾರಿ ತಡೆಗೆ ನಿರ್ಧಾರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*