ಅಖಿಲ ಭಾರತ ಬ್ಯಾರಿ ಪರಿಷತ್ತು ಜಿಲ್ಲಾಧ್ಯಕ್ಷ ಕೆ.ಎಸ್.ಅಬುಬಕ್ಕರ್ ಪಲ್ಲಮಜಲು ಅವರಿಗೆ ಸನ್ಮಾನ

ಬಂಟ್ವಾಳ: ಅಖಿಲ ಭಾರತ ಬ್ಯಾರಿ ಪರಿಷತ್ (ರಿ) ಮಂಗಳೂರು ಇದರ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಹಾಜಿ ಕೆ.ಎಸ್.ಅಬೂಬಕ್ಕರ್ ಪಲ್ಲಮಜಲು ಅವರನ್ನು ಅವರ ಹುಟ್ಟೂರು ಪಲ್ಲಮಜಲು ಜಮಾಅತ್ ಆಡಳಿತ ಸಮಿತಿ ಹಾಗೂ ವಿವಿಧ ಸ್ಥಳೀಯ ಸಂಘ-ಸಂಸ್ಥೆಗಳ ವತಿಯಿಂದ ಮಸೀದಿ ವಠಾರದಲ್ಲಿ ಸನ್ಮಾನಿಸಲಾಯಿತು.

ಮೂಲತಃ ಪಲ್ಲಮಜಲು ನಿವಾಸಿಯಾಗಿರುವ ಹಾಜಿ ಕೆ.ಎಸ್. ಅಬೂಬಕ್ಕರ್ ಪಲಮಜಲು ಅವರು ಪ್ರಸ್ತುತ  ಮಂಗಳೂರಿನಲ್ಲಿ ವಾಸವಾಗಿದ್ದರೂ ಪಲ್ಲಮಜಲು ಜಮಾತ್ ವ್ಯಾಪ್ತಿಯಲ್ಲಿ ಇಂದಿಗೂ ಸಲ್ಲಿಸುತ್ತಿರುವ ಜನಪರ,  ಸಾಮಾಜಿಕ ಸೇವಾ ಕಾರ್ಯಗಳನ್ನು ಮನ್ನಿಸಿ ಪಲ್ಲಮಜಲು ಮಸೀದಿಯ ಆಡಳಿತ ಸಮಿತಿ, ಎಸ್ಕೆಎಸ್ಸೆಸ್ಸೆಫ್  ಪಲ್ಲಮಜಲು ಘಟಕ, ಪಲ್ಲಮಜಲು ಮುಬಾರಕ್ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ (ರಿ), ಪಲ್ಲಮಜಲು  ಅಸಾಸುಲ್ ಇಸ್ಲಾಂ ಸ್ಟೂಡೆಂಟ್ಸ್ ಫೆಡರೇಶನ್ (ರಿ) ಹಾಗೂ ಅಬೂಬಕ್ಕರ್ ಅವರಿಗೆ ಧಾರ್ಮಿಕ  ವಿಧ್ಯಾಭ್ಯಾಸ  ಕಲಿಸಿದ ಗುರುವರ್ಯ ಹಾಜಿ ಸಿ.ಕೆ. ಸೂಫಿ ಮುಸ್ಲಿಯಾರ್ ಅವರು ಹಾಜಿ ಕೆ.ಎಸ್. ಅಬೂಬಕ್ಕರ್ ಪಲ್ಲಮಜಲು  ಅವರನ್ನು ಗೌರವಿಸಿದರು.

ಪಲ್ಲಮಜಲು ಮಸೀದಿ ಆಡಳಿತ ಸಮಿತಿಯಲ್ಲಿ ಒಟ್ಟು ಸುಮಾರು 30 ವರ್ಷಗಳ ಕಾಲ ಮಸೀದಿ ಸೇವೆಯನ್ನು ಮಾಡಿದ ಹಾಜಿ ಕೆ.ಎಸ್. ಅಬೂಬಕ್ಕರ್ ಅವರು ಸರಕಾರಿ ಯೋಜನೆಯಾಗಿರುವ ಸಂಪೂರ್ಣ ಸಾಕ್ಷರತಾ  ಆಂದೋಲನದ ಕಾರ್ಯದರ್ಶಿಯಾಗಿ, ದಕ್ಷಿಣ ಕನ್ನಡ ಜಿಲ್ಲಾ ರೆಡ್ ಕ್ರಾಸ್ ಸೊಸೈಟಿ ಸದಸ್ಯರಾಗಿ, ದಫ್  ಎಸೋಸಿಯೇಶನ್ ದ.ಕ. ಮತ್ತು ಉಡುಪಿ ಜಿಲ್ಲಾ ಸಮಿತಿಯ ಸದಸ್ಯರಾಗಿ, ನೇತ್ರಾವತಿ ಜ್ಯೂನಿಯರ್ ಛೇಂಬರ್ ಸದಸ್ಯರಾಗಿ, ಬಂಟ್ವಾಳ ತಾಲೂಕು ಸೌಹಾರ್ದ ಒಕ್ಕೂಟದ ಅಧ್ಯಕ್ಷರಾಗಿ, ದ.ಕ. ಜಿಲ್ಲಾ ಮುಸ್ಲಿಂ ಒಕ್ಕೂಟದ  ಕೋಶಾಧಿಕಾರಿಯಾಗಿ, ಮಂಗಳೂರು ಮುಸ್ಲಿಂ ಸೆಂಟ್ರಲ್ ಕಮಿಟಿ ಸದಸ್ಯರಾಗಿ, ಅಹಿಂದ ಜನ ಚಳುವಳಿ ದಕ್ಷಿಣ ಕನ್ನಡ ಜಿಲ್ಲಾ ಸದಸ್ಯರಾಗಿ, ಮೈನಾರಿಟಿ ಡೆವಲಪ್‍ಮೆಂಟ್ ಫೌಂಡೇಶನ್ (ರಿ) ದ.ಕ. ಜಿಲ್ಲಾ ಕಾಯಾಧ್ಯಕ್ಷರಾಗಿ ಬಂಟ್ವಾಳ ತಾಲೂಕು ಜಮೀಯ್ಯತುಲ್ ಫಲಾಹ್ ಸದಸ್ಯರಾಗಿ ಸಾಮಾಜಿಕ ಸೇವಾ ಕಾರ್ಯವನ್ನು ಮಾಡುತ್ತಾ ಬಂದಿರುತ್ತಾರೆ.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಅಖಿಲ ಭಾರತ ಬ್ಯಾರಿ ಪರಿಷತ್ತು ಜಿಲ್ಲಾಧ್ಯಕ್ಷ ಕೆ.ಎಸ್.ಅಬುಬಕ್ಕರ್ ಪಲ್ಲಮಜಲು ಅವರಿಗೆ ಸನ್ಮಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*