ವ್ಯವಸ್ಥೆ ಸುಧಾರಣೆಗೆ ಹಲವು ಕ್ರಮ: ಬಂಟ್ವಾಳ ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್

ಬಂಟ್ವಾಳ: ಮನೆ ಮನೆಗೆ ಕಸ ವಿಲೇವಾರಿಗೆ ಸಂಬಂಧಿಸಿ ತ್ಯಾಜ್ಯ ಸಂಗ್ರಹಣೆಗೆ ವಾಹನಗಳು ಮನೆ ಬಾಗಿಲಿಗೆ ಬರುವ ವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಪ್ರಯತ್ನಿಸಲಾಗುವುದು. ಸಮಸ್ಯೆಗಳನ್ನು ಪರಿಹರಿಸಿ, ಸುಧಾರಣೆಗಳನ್ನು ಅಳವಡಿಸಿಕೊಳ್ಳಲಾಗುವುದು. ಜನರ ಬೇಡಿಕೆಗಳನ್ನು ಹಂತಹಂತವಾಗಿ ಈಡೇರಿಸಲಾಗುತ್ತದೆ ಎಂದು ಬಂಟ್ವಾಳ ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್ ಹೇಳಿದರು.

ಬಂಟ್ವಾಳ ಪುರಸಭೆಯ ಮುಂಗಡಪತ್ರ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಸೋಮವಾರ ನಡೆದ ಸಂಘ, ಸಂಸ್ಥೆಗಳ ಅಧ್ಯಕ್ಷರು, ನಾಗರಿಕರ ಅಹವಾಲು ಸ್ವೀಕಾರ ಸಭೆಯಲ್ಲಿ ಅವರು ಮಾತನಾಡಿದರು.  ಜನರು ಎಲ್ಲಿ ಕಸ ಬಿಸಾಡಿದರೂ ಟ್ಯಾಕ್ಸ್ ಕಟ್ಟಲೇಬೇಕು, ಹಾಗಿದ್ದ ಮೇಲೆ ಮನೆ ಮನೆಗೆ ವಾಹನಗಳು ಬಂದಾಗ ಅವುಗಳಿಗೆ ನೀಡಬಹುದು ಎಂದು ಅಧ್ಯಕ್ಷರು ತಿಳಿಸಿದರು. ಮೊಡಂಕಾಪು ರಾಜಪಲ್ಕೆ ಪರಿಸರದಲ್ಲಿ ತ್ಯಾಜ್ಯ ಸಾಗಾಟದ ವಾಹನಗಳು ಬರುವುದಿಲ್ಲ ಎಂದ ಅಹವಾಲುಗಳು ಕೇಳಿಂದರೆ, ಕೆಲವೆಡೆ ನಿಯಮಿತವಾಗಿ ವಾಹನಗಳು ಸಾಗುವ ಕುರಿತು ಮಾಹಿತಿ ಬಂತು. ಕಸ ವಿಲೇವಾರಿಗೆ ವಾಹನಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದ್ದು, ಮುಂದಿನ ದಿನಗಳಲ್ಲಿ ಪುರಸಭೆಯ ಎಲ್ಲ ಪ್ರದೇಶಗಳಿಂದಲೂ ತ್ಯಾಜ್ಯ ಸಂಗ್ರಹಣೆಯನ್ನು ಕಟ್ಟುನಿಟ್ಟಾಗಿ ಮಾಡಿ ಸುಂದರ ಬಂಟ್ವಾಳ ರೂಪಿಸಲು ಯತ್ನಿಸಲಾಗುವುದು. ತ್ಯಾಜ್ಯ ಅಲ್ಲಲ್ಲಿ ಎಸೆಯದಿರುವಂತೆ ಜನಜಾಗೃತಿ ಮೂಡಿಸಲಾಗುವುದು ಇದಕ್ಕೆ ನಾಗರಿಕರ ಸಹಕಾರ ಅಗತ್ಯ ಎಂದು ಅಧ್ಯಕ್ಷರು ಹೇಳಿದರು.

ತರಕಾರಿ ವ್ಯಾಪಾರಗಳಿಂದ ಪಾದಚಾರಿಗಳಿಗೆ ಅಡ್ಡಿ ಉಂಟಾಗುವುದು, ಪಾರ್ಕಿಂಗ್ ವ್ಯವಸ್ಥೆ ಇಲ್ಲದೇ ಇರುವುದು, ಆಯಕಟ್ಟಿನ ಜಾಗಗಳಲ್ಲಿ ಕ್ಯಾಮರಾ ಅಳವಡಿಸುವುದು, ಮೇಲ್ಕಾರ್ ಪ್ರದೇಶದಲ್ಲಿ ಬಸ್ ನಿಲ್ದಾಣ ಸಹಿತ ಮೂಲಸೌಕರ್ಯ ವೃದ್ಧಿ, ಸಂಚಯಗಿರಿ, ಸಹಿತ ಹಲವು ಪ್ರದೇಶಗಳಲ್ಲಿ ಕೆಲವೆಡೆ ಸಾರ್ವಜನಿಕ ನೀರು ಸರಬರಾಜು ಪೈಪುಗಳಿಂದ ನೀರು ಸೋರಿಕೆ ಆಗುವುದು ಮೊದಲಾದ ವಿಷಯಗಳು ಪ್ರಸ್ತಾಪಗೊಂಡವು.

ಜಾಹೀರಾತು

ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ ಮಾತನಾಡಿ ಎಲ್ಲ ವಿಚಾರಗಳನ್ನು ಆದ್ಯತೆ ಮೇರೆಗೆ ಪರಿಗಣಿಸಿ, ಬಜೆಟ್ ನಲ್ಲಿ ಅಳವಡಿಸುವ ಕುರಿತು ಪ್ರಯತ್ನಿಸುವುದಾಗಿ ತಿಳಿಸಿದರು. ಉಪಾಧ್ಯಕ್ಷ ಜೆಸಿಂತಾ ಡಿಸೋಜ, ಇಂಜಿನಿಯರ್ ಡೊಮೆನಿಕ್ ಡಿಮೆಲ್ಲೊ, ಮೆನೇಜರ್ ಲೀಲಾವತಿ ಸಿಬ್ಬಂದಿಗಳಾದ ರಝಾಕ್, ಸನ್ನಿ ವಿಲ್ಸನ್ ಲೊಬೊ, ಸಾರ್ವಜನಿಕ ಪ್ರತಿನಿಧಿಗಳಾದ ವಸಂತಿ ಗಂಗಾಧರ್, ದಾಮೋದರ ಸಂಚಯಗಿರಿ, ಶಿವಶಂಕರ್ ಕೈಕುಂಜೆ, ಮಹಾಬಲೇಶ್ವರ ಹೆಬ್ಬಾರ, ನಾರಾಯಣ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದು ಸೂಕ್ತ ಸಲಹೆ ಸೂಚನೆಗಳನ್ನು ಒದಗಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ವ್ಯವಸ್ಥೆ ಸುಧಾರಣೆಗೆ ಹಲವು ಕ್ರಮ: ಬಂಟ್ವಾಳ ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*