ಪಡಿತರ ಚೀಟಿಯಲ್ಲಿ ದುರ್ಲಾಭ ಪಡೆಯುವವರ ವಿರುದ್ಧ ಕಾನೂನು ರೀತಿಯ ಕ್ರಮ

ಪಡಿತರ ಚೀಟಿಯಲ್ಲಿ ಸೇರ್ಪಡೆಗೊಂಡಿರುವ ಸದಸ್ಯರುಗಳಲ್ಲಿ ಮರಣ ಹೊಂದಿರುವವರ ಮತ್ತು ಕುಟುಂಬದಿಂದ ಹೊರಗೆ ಹೋದವರ ಹೆಸರನ್ನು ಇರಿಸಿಕೊಂಡಿರುವವರು ಅಂತಹ ಹೆಸರುಗಳನ್ನು ಕೂಡಲೇ ಪಡಿತರ ಚೀಟಿಯಿಂದ ತೆಗೆದುಹಾಕಬೇಕು. ಒಂದೇ ಮನೆಯಲ್ಲಿರುವವರು ಒಂದಕ್ಕಿಂತ ಹೆಚ್ಚು ಪಡಿತರ ಚೀಟಿ ಹೊಂದಿದ್ದಲ್ಲಿ ಅದು ಅಪರಾಧವಾಗಿದ್ದು, ಕೂಡಲೇ ಒಂದೇ ಪಡಿತರ ಚೀಟಿಗೆ ಹೆಸರುಗಳನ್ನು ವಿಲೀನಗೊಳಿಸಬೇಕು.

ಪಡಿತರ ಚೀಟಿಯಲ್ಲಿ ಮೃತರ ಹಾಗೂ ಕುಟುಂಬದಿಂದ ಹೊರ ಹೋದವರ ಹೆಸರುಗಳನ್ನು ರದ್ದುಪಡಿಸಲು ಮತ್ತು ಒಂದೇ ಕುಟುಂಬದವರನ್ನು ವಿಲೀನಗೊಳಿಸಲು ಕೊನೆಯ ಅವಕಾಶವನ್ನು ನೀಡಲಾಗಿದ್ದು, ತ್ವರಿತವಾಗಿ ಈ ತಿಂಗಳಾತ್ಯದೊಳಗೆ ಅಗತ್ಯ ತಿದ್ದುಪಡಿ ಮಾಡಿಸಬೇಕು.

ಪಡಿತರ ಚೀಟಿಗಳಲ್ಲಿ ಸುಳ್ಳು ಮಾಹಿತಿ ನೀಡಿ ದುರ್ಲಾಭ ಪಡೆಯುತ್ತಿರುವವರ ಪಡಿತರ ಚೀಟಿಯನ್ನು ಅನರ್ಹಗೊಳಿಸಿ ದಂಡ ವಸೂಲಿ ಮಾಡಲಾಗುವುದಲ್ಲದೇ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಪಡಿತರ ಚೀಟಿಯಲ್ಲಿ ದುರ್ಲಾಭ ಪಡೆಯುವವರ ವಿರುದ್ಧ ಕಾನೂನು ರೀತಿಯ ಕ್ರಮ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*