ಗಿಡಕ್ಕೆ ನೀರು ಎರೆಯುವ ಮೂಲಕ – ಪ್ರತಿನಿಧಿಗಳ ಸಾಮರ್ಥ್ಯಾಭಿವೃದ್ಧಿ ತರಬೇತಿ ಉದ್ಘಾಟನೆ

“ಗ್ರಾಮಪಂಚಾಯತ್ ವ್ಯಾಪ್ತಿಯ ಬೇಡಿಕೆಗೆ ಧ್ವನಿಯಾಗುವ  ಮೂಲಕ ಪಂಚಾಯತ್  ಜನಸೇವೆಯಲ್ಲಿ ತೊಡಗಿಸಿಕೊಳ್ಳಿ , ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ ಪ್ರಜಾಪ್ರಭುತ್ವ ವ್ಯವಸ್ಥೆಯ ಅಡಿಗಲ್ಲು ಆಗಿರುವ ಪಂಚಾಯತ್ ವ್ಯವಸ್ಥೆಯ ಮೂಲಕ, ಸದಸ್ಯರು ಹೊಂದಾಣಿಕೆಯಿಂದ ಕಾರ್ಯನಿರ್ವಹಿಸಿದರೆ ಗ್ರಾಮಾಭಿವೃದ್ಧಿ ಸಾಧ್ಯ” ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಅಬ್ದುಲ್ ನಜಿರ್ ಸಾಬ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ, ಮೈಸೂರು, ದ.ಕ. ಮಂಗಳೂರು, ತಾಲೂಕು ಪಂಚಾಯತ್ ಬಂಟ್ವಾಳ ವತಿಯಿಂದ ನಡೆದ ನೂತನವಾಗಿ ಆಯ್ಕೆಯಾದ ಗ್ರಾಮ ಪಂಚಾಯತ್ ಚುನಾಯಿತ ಪ್ರತಿನಿಧಿಗಳ ಸಾಮರ್ಥ್ಯಾಭಿವೃದ್ದಿ ತರಬೇತಿಯನ್ನು ಗಿಡಕ್ಕೆ ನೀರು ಎರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧ್ಯಕ್ಷತೆವಹಿಸಿ, ಮಾತನಾಡಿ ತಳಮಟ್ಟದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಮ‌ೂಲಕ, ಪಂಚಾಯತ್ ರಾಜ್ ವ್ಯವಸ್ಥೆಯ ಆಶಯವನ್ನು ಬಲಿಷ್ಠಗೊಳಿಸಬೇಕಾಗಿದೆ, ಗ್ರಾಮದ ಮೂಲಭೂತ ಸೌಕರ್ಯಗಳನ್ನು ಒದಗಿಸಿ   ಅಭಿವೃದ್ಧಿಯ ಜೊತೆಯಾಗಿ  ಎಂದು ತಿಳಿಸಿದರು.  

ಜಾಹೀರಾತು

ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಅಲಿ ಬೋಳಂತೂರು, ಮಾತನಾಡಿ ಸಮಾಜದ ಕಟ್ಟಕಡೆಯ ವ್ಯಕ್ತಿಗಳಿಗೆ ನ್ಯಾಯ ಒದಗಿಸುವ ಕೆಲಸ ಗ್ರಾ.ಪಂ.ಸದಸ್ಯರಿಂದ ಆಗಬೇಕಾಗಿದೆ ಎಂದರು.

ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ,  ಮಾತನಾಡಿ ಒಗ್ಗಟ್ಟಿನಿಂದ ಕೆಲಸ ಮಾಡಿದಾಗ ಗ್ರಾಮದ ಅಭಿವೃದ್ಧಿ ಯಾಗುತ್ತದೆ ಎಂದು ಹೇಳಿದರು.

ಜಿ.ಪಂ. ಲೆಕ್ಕಾಧಿಕಾರಿ ಜೀವಲ್ ಖಾನ್, ತಾ.ಪಂ.ವ್ಯವಸ್ಥಾಪಕಿ ಶಾಂಭವಿ, ತರಬೇತುದಾರರಾದ ಮಂಜುವಿಟ್ಲ, ಮೌನೇಶ ವಿಶ್ವಕರ್ಮ,  ಜಯಲಕ್ಷ್ಮೀ  ತಾ.ಪಂ. ಸಿಬ್ಬಂದಿಗಳು  ಉಪಸ್ಥಿತರಿದ್ದರು.

ಜಾಹೀರಾತು

 ಅನಂತನಾಡಿ, ಅಮ್ಮುಂಜೆ, ಬೋಳಂತೂರು, ಬಡಗಬೆಳ್ಳೂರು ಗ್ರಾ.ಪಂ. ಪ್ರತಿನಿಧಿಗಳು ತರಬೇತಿಯಲ್ಲಿ ಭಾಗವಹಿಸಿದರು. ತರಬೇತುದಾರ ಉಮಾನಾಥ ಶೆಟ್ಟಿ ಪ್ರಸ್ತಾವನೆ ಗೈದರು. ತಾ.ಪಂ. ಸಹಾಯಕ ಲೆಕ್ಕಾಧಿಕಾರಿ ಪ್ರಶಾಂತ್ ಸ್ವಾಗತಿಸಿ, ತಾ.ಪಂ.ಸಹಾಯಕ ನಿರ್ದೇಶಕ ಶಿವಾನಂದ್ ವಂದಿಸಿದರು.ತರಬೇತುದಾರ ಫಾರೂಕ್ ಗೂಡಿನಬಳಿ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಗಿಡಕ್ಕೆ ನೀರು ಎರೆಯುವ ಮೂಲಕ – ಪ್ರತಿನಿಧಿಗಳ ಸಾಮರ್ಥ್ಯಾಭಿವೃದ್ಧಿ ತರಬೇತಿ ಉದ್ಘಾಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*