ಬ್ರಹ್ಮರಕೂಟ್ಲು ಟೋಲ್ ಪ್ಲಾಜಾ ವಿರುದ್ಧ ಬಿ.ಸಿ.ರೋಡಿನಲ್ಲಿ ಜನಾಕ್ರೋಶ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಬಂಟ್ವಾಳ ತಾಲೂಕಿನ ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿ ಆಯೋಜಿಸಿದ ಸಭೆಯಲ್ಲಿ ಸಾರ್ವಜನಿಕ ವಲಯಕ್ಕೆ ದಿನನಿತ್ಯ ಸಮಸ್ಯೆಯನ್ನು ಉಂಟು ಮಾಡುತ್ತಿರುವ ಬ್ರಹ್ಮರಕೂಟ್ಲು ಟೋಲ್ ಗೇಟ್ ಪ್ಲಾಜಾ ವಿರುದ್ಧ ಜನಾಕ್ರೋಶ ವ್ಯಕ್ತವಾಯಿತು.

ಇಲ್ಲಿನ ಶ್ರೀರಕ್ತೇಶ್ವರಿ ದೇವಸ್ಥಾನ ಸಭಾಂಗಣದಲ್ಲಿ ಬುಧವಾರ ಸಂಜೆ ನಡೆದ ಸಮಿತಿಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಮಾತನಾಡಿದ ಹಿರಿಯ ನ್ಯಾಯವಾದಿ ಉಮೇಶ್ ಕುಮಾರ್ ವೈ ಅವರು, “ಬಿ.ಸಿ.ರೋಡ್, ಬ್ರಹ್ಮರಕೂಟ್ಲು ಟೋಲ್ ಗೇಟ್ ಅವೈಜ್ಞಾನಿಕ ಪದ್ಧತಿಯನ್ನು ಬದಲಾಯಿಸಲು ಸರಕಾರ ಚಿಂತನೆ ನಡೆಸಬೇಕು. ಈ ನಿಟ್ಟಿನಲ್ಲಿ ಮಾರ್ಚ್ 9ರಂದು ಜನಜಾಗೃತಿ ಅಭಿಯಾನ ನಡೆಯಲಿದ್ದು, ಸಾರ್ವಜನಿಕರ ಸಹಭಾಗಿತ್ವದಲ್ಲಿ ಯಶಸ್ವಿಯಾಗಲಿದೆ” ಎಂದರು.

ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿ ಅಧ್ಯಕ್ಷ ಬಿ.ಎಂ. ಪ್ರಭಾಕರ ದೈವಗುಡ್ಡೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಜೈನ್, ಪ್ರಧಾನ  ಕಾರ್ಯದರ್ಶಿ ಬಿ.ಶೇಖರ್, ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ತುಂಬೆ, ಕೋಶಾಧಿಕಾರಿ ಸುರೇಂದ್ರ ಕೋಟ್ಯಾನ್, ಕಾರ್ಯಕಾರಿ ಸಮಿತಿ ಸದಸ್ಯರಾದ ರಾಜ ಚೆಂಡ್ತಿಮಾರ್, ಸದಾಶಿವ ಬಂಗೇರ, ಇಬ್ರಾಹಿಂ ಶಂಭೂರು, ಕಳ್ಳಿಗೆ ಗ್ರಾ.ಪಂ. ಸದಸ್ಯ ಮಧುಸೂದನ್ ಶೆಣೈ, ಕಾರು ಚಾಲಕ ಸಂಘದ ಉಪಾಧ್ಯಕ್ಷ ಸುರೇಶ್ ಬಂಗೇರಾ, ವ್ಯಾನು ಚಾಲಕರ ಸಂಘದ ಉಪಾಧ್ಯಕ್ಷ ನಮೇಶ್ ಶೆಟ್ಟಿ, ಸಣ್ಣ ಮತ್ತು ದೊಡ್ಡ ಗೂಡ್ಸ್ ಚಾಲಕರ ಸಂಘ ಸದಸ್ಯ ವರದರಾಜ್, ವಿವಿಧ ಸಂಘಟನೆಗಳ ಪ್ರಮುಖರು ಜಗನ್ನಾಥ ಬಂಟ್ವಾಳ, ಇಬ್ರಾಹಿಂ ಕೈಲಾರ್, ಅಯ್ಯೂಬ್ ಜಿ.ಕೆ. ರಾಮಣ್ಣ ಮರ್ದೊಳಿ ಮತ್ತಿತರರು ಭಾಗವಹಿಸಿದರು.

About the Author

NEWSDESK
www.bantwalnews.comನಲ್ಲಿ ಪ್ರಕಟಗೊಳ್ಳುವ ಜಾಹೀರಾತುಗಳ, ಲೇಖನಗಳ ವಿಚಾರಗಳಿಗೂ ವೆಬ್ ತಾಣಕ್ಕೂ ಸಂಬಂಧವಿಲ್ಲ. ಇದು ಓದುಗರ ಗಮನಕ್ಕೆ. NOTE: : All opinions regarding the advertisments and articles published in bantwalnews and the related topic are those of the author and advertiser, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬ್ರಹ್ಮರಕೂಟ್ಲು ಟೋಲ್ ಪ್ಲಾಜಾ ವಿರುದ್ಧ ಬಿ.ಸಿ.ರೋಡಿನಲ್ಲಿ ಜನಾಕ್ರೋಶ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*