ಬಂಟ್ವಾಳ

ಗ್ರಾಮ ಸ್ವರಾಜ್ಯ ಪರಿಕಲ್ಪನೆ ಸಾಕಾರಗೊಳ್ಳಲು ಸಮಾಜದೊಂದಿಗೆ ಬೆರೆಯಬೇಕು: ಬಂಟ್ವಾಳದಲ್ಲಿ ರಾಜ್ಯ ತರಬೇತಿ ಸಂಯೋಜಕ ಟಿ.ಎಂ.ಅಬುಬಕ್ಕರ್

ಬಂಟ್ವಾಳ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ, ಮೈಸೂರು, ದ.ಕ. ಜಿಲ್ಲಾ ಪಂಚಾಯತ್, ಬಂಟ್ವಾಳ ತಾಲೂಕು ಪಂಚಾಯತ್ ವತಿಯಿಂದ ಬಂಟ್ವಾಳ ತಾಲೂಕು ಪಂಚಾಯತ್ ಎಸ್.ಜಿ.ಎಸ್. ವೈ. ಮತ್ತು ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳ ಸಾಮರ್ಥ್ಯಾಭಿವೃದ್ದಿ ತರಬೇತಿ ಕಾರ್ಯಗಾರಕ್ಕೆ ರಾಜ್ಯ ತರಬೇತಿ ಸಂಯೋಜಕ ಟಿ.ಎಂ.ಅಬುಬಕ್ಕರ್ ಭೇಟಿ ನೀಡಿ ಗ್ರಾ.ಪಂ. ಸದಸ್ಯರೊಂದಿಗೆ ಮಾತನಾಡಿದರು.

ಪಂಚಾಯತ್ ಸದಸ್ಯರು ಸಮಾಜದ ಜೊತೆಗೆ ಬೆರೆತಾಗ ಮಾತ್ರ ಗ್ರಾಮಸ್ವರಾಜ್ಯದ ಪರಿಕಲ್ಪನೆ ಸಾಕಾರಗೊಳ್ಳಲು ಸಾಧ್ಯ ಎಂದು ಟಿ.ಎಂ. ಅಬೂಬಕ್ಕರ್  ಹೇಳಿದರು. ಪಂಚಾಯತ್ ರಾಜ್ ಪರಿಕಲ್ಪನೆ, ಮೂಲ ಆಶಯ, ತರಬೇತಿಯ ರೂಪುರೇಷೆಯ ಕುರಿತು ವಿವರಿಸಿದ ಅವರು, ಎಲ್ಲಾ ಸದಸ್ಯರು ಬದಲಾಗಿರುವ ಪಂಚಾಯತ್ ರಾಜ್ ಕಾಯ್ದೆಯ ಬಗ್ಗೆ ಅರಿವನ್ನು ಪಡೆದುಕೊ ಳ್ಳಬೇಕು ಎಂದರು. ಸದಸ್ಯರಾಗಿ ಆಯ್ಕೆಯಾಗಿರುವುದು ನಿಮಗೆ ದೊರಕಿರುವ ದೊಡ್ಡ ಅವಕಾಶವಾಗಿದ್ದು, ಲೋಕನೌಕರ ಎನ್ನುವ ಮನೋಭಾವದೊಂದಿಗೆ ಗ್ರಾಮದ ಅಭಿವೃದ್ಧಿಯ ಲ್ಲಿ ಕ್ರಿಯಾಶೀಲರಾಗಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು. ತಾಲೂಕು ಪಂಚಾಯತ್ ಸಹಾಯಕ ಲೆಕ್ಕಾಧಿಕಾರಿ ಪ್ರಶಾಂತ್ ಬಳಂಜ, ತರಬೇತುದಾರರಾದ ಮಂಜುವಿಟ್ಲ, ಉಮಾನಾಥ ಶೆಟ್ಟಿ, ಮೌನೇಶ್ ವಿಶ್ವಕರ್ಮ, ಜಯಲಕ್ಷ್ಮಿ, ಫಾರೂಕ್ ಗೂಡಿನಬಳಿ ಈ ಸಂದರ್ಭದಲ್ಲಿ ಹಾಜರಿದ್ದರು.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.