ಬಂಟ್ವಾಳ

ಗ್ರಾಮ ಸ್ವರಾಜ್ಯ ಪರಿಕಲ್ಪನೆ ಸಾಕಾರಗೊಳ್ಳಲು ಸಮಾಜದೊಂದಿಗೆ ಬೆರೆಯಬೇಕು: ಬಂಟ್ವಾಳದಲ್ಲಿ ರಾಜ್ಯ ತರಬೇತಿ ಸಂಯೋಜಕ ಟಿ.ಎಂ.ಅಬುಬಕ್ಕರ್

ಬಂಟ್ವಾಳ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ, ಮೈಸೂರು, ದ.ಕ. ಜಿಲ್ಲಾ ಪಂಚಾಯತ್, ಬಂಟ್ವಾಳ ತಾಲೂಕು ಪಂಚಾಯತ್ ವತಿಯಿಂದ ಬಂಟ್ವಾಳ ತಾಲೂಕು ಪಂಚಾಯತ್ ಎಸ್.ಜಿ.ಎಸ್. ವೈ. ಮತ್ತು ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳ ಸಾಮರ್ಥ್ಯಾಭಿವೃದ್ದಿ ತರಬೇತಿ ಕಾರ್ಯಗಾರಕ್ಕೆ ರಾಜ್ಯ ತರಬೇತಿ ಸಂಯೋಜಕ ಟಿ.ಎಂ.ಅಬುಬಕ್ಕರ್ ಭೇಟಿ ನೀಡಿ ಗ್ರಾ.ಪಂ. ಸದಸ್ಯರೊಂದಿಗೆ ಮಾತನಾಡಿದರು.

ಪಂಚಾಯತ್ ಸದಸ್ಯರು ಸಮಾಜದ ಜೊತೆಗೆ ಬೆರೆತಾಗ ಮಾತ್ರ ಗ್ರಾಮಸ್ವರಾಜ್ಯದ ಪರಿಕಲ್ಪನೆ ಸಾಕಾರಗೊಳ್ಳಲು ಸಾಧ್ಯ ಎಂದು ಟಿ.ಎಂ. ಅಬೂಬಕ್ಕರ್  ಹೇಳಿದರು. ಪಂಚಾಯತ್ ರಾಜ್ ಪರಿಕಲ್ಪನೆ, ಮೂಲ ಆಶಯ, ತರಬೇತಿಯ ರೂಪುರೇಷೆಯ ಕುರಿತು ವಿವರಿಸಿದ ಅವರು, ಎಲ್ಲಾ ಸದಸ್ಯರು ಬದಲಾಗಿರುವ ಪಂಚಾಯತ್ ರಾಜ್ ಕಾಯ್ದೆಯ ಬಗ್ಗೆ ಅರಿವನ್ನು ಪಡೆದುಕೊ ಳ್ಳಬೇಕು ಎಂದರು. ಸದಸ್ಯರಾಗಿ ಆಯ್ಕೆಯಾಗಿರುವುದು ನಿಮಗೆ ದೊರಕಿರುವ ದೊಡ್ಡ ಅವಕಾಶವಾಗಿದ್ದು, ಲೋಕನೌಕರ ಎನ್ನುವ ಮನೋಭಾವದೊಂದಿಗೆ ಗ್ರಾಮದ ಅಭಿವೃದ್ಧಿಯ ಲ್ಲಿ ಕ್ರಿಯಾಶೀಲರಾಗಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು. ತಾಲೂಕು ಪಂಚಾಯತ್ ಸಹಾಯಕ ಲೆಕ್ಕಾಧಿಕಾರಿ ಪ್ರಶಾಂತ್ ಬಳಂಜ, ತರಬೇತುದಾರರಾದ ಮಂಜುವಿಟ್ಲ, ಉಮಾನಾಥ ಶೆಟ್ಟಿ, ಮೌನೇಶ್ ವಿಶ್ವಕರ್ಮ, ಜಯಲಕ್ಷ್ಮಿ, ಫಾರೂಕ್ ಗೂಡಿನಬಳಿ ಈ ಸಂದರ್ಭದಲ್ಲಿ ಹಾಜರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ