Uncategorized

ಬಂಟ್ವಾಳದಲ್ಲಿ ತಾಲೂಕು ಮಟ್ಟದ ಶಿವಾಜಿ ಜಯಂತಿ ಹಾಗೂ ಸವಿತಾ ಮಹರ್ಷಿ ಜಯಂತಿ ಆಚರಣೆ

ಬಂಟ್ವಾಳ: ತಮ್ಮ ಪರಂಪರೆಯನ್ನು ಉಳಿಸಿ ಕೊಂಡು ಸಮಾಜ ಸೇವೆಯ ಮನೋಭಾವ ದೊಂದಿಗೆ ದುಡಿಯುತ್ತಿರುವ ಸವಿತಾ ಸಮಾಜ ‌ಶ್ಲಾಘನೆಗೆ ಅರ್ಹ ಅಲ್ಲದೇ ಸ್ವಾಭಿಮಾನಿ ರಾಷ್ಟ್ರ ನಿರ್ಮಾಣಕ್ಕೆ ಹೋರಾಡಿದ ಶಿವಾಜಿ ಮಹಾರಾಜರ ಶೌರ್ಯ, ಸಾಹಸ, ದೇಶಭಕ್ತಿ ನಮಗೆಲ್ಲರಿಗೂ ಆದರ್ಶ ಎಂದು ಕೇಂದ್ರ ಸ್ಥಾನಿಯ ಶಿರಸ್ತೇದಾರ್ ಅಣ್ಣು ನಾಯ್ಕ್ ಹೇಳಿದರು. ಶುಕ್ರವಾರ ಬಿ.ಸಿ.ರೋಡಿನ ಮಿನಿ ವಿಧಾನಸೌಧ ಸಭಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ನಡೆದ ಶ್ರೀ ಸವಿತಾ ಮಹರ್ಷಿ ಹಾಗೂ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.

ತಾಲೂಕು ಸವಿತಾ ಸಮಾಜದ ಅಧ್ಯಕ್ಷ ಸುರೇಶ್ ನಂದೊಟ್ಟು ಮಾತನಾಡಿ, ದೇವಾನು ದೇವತೆಗಳ ಆಯುಷ್ಕರ್ಮವನ್ನು ನೆರವೇರಿಸುತ್ತಿದ್ದ ಸವಿತಾ ಮಹರ್ಷಿಗಳ ಜನ್ಮ ದಿನವನ್ನು ನಾವು
ಸವಿತಾ ಜಯಂತಿಯಾಗಿ ಆಚರಿಸುತ್ತಿದ್ದೇವೆ. ಆಯುಷ್ಕರ್ಮ‌ ಮಾತ್ರವಲ್ಲ ಆಯುರ್ವೇದವನ್ನು ಒಳಗೊಂಡು ಸಮಾಜದ ಒಳಿತಿಗಾಗಿ ಈ ಸಮಾಜ ಶ್ರಮಿಸುತ್ತಿದೆ ಎಂದರು. ಈ‌ ಸಂದರ್ಭ ಸವಿತಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ವಿಶ್ವನಾಥ್ ಬಂಟ್ವಾಳ, ಉಪತಹಸೀಲ್ದಾರ್ ರಾಜೇಶ್ ನಾಯ್ಕ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಶುಕುಮಾರ್, ತಾಲೂಕು ಕಚೇರಿ ಸಿಬ್ಬಂದಿ, ಗ್ರಾಮ ಲೆಕ್ಕಾಧಿಕಾರಿಗಳು ಗ್ರಾಮ ಸಹಾಯಕರು ಹಾಗೂ ಸಾರ್ವಜನಿಕ ರು ಉಪಸ್ಥಿತರಿದ್ದರು. ಜನಾರ್ದನ ಬಂಟ್ವಾಳ್ ಸ್ವಾಗತಿಸಿ ವಂದಿಸಿದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.