ಕಲ್ಲಡ್ಕ

ಕಾರು ಪ್ರಪಾತಕ್ಕೆ ಉರುಳಿ ಇಬ್ಬರಿಗೆ ಗಾಯ

ಬಂಟ್ವಾಳ: ಕಾರೊಂದು ಪ್ರಪಾತಕ್ಕೆ ಉರುಳಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ನಡೆದಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದು ಬುಡೋಳಿ ಸಮೀಪ ಇರುವ ಅಪಾಯಕಾರಿ ಹೊಂಡಕ್ಕೆ ಉರುಳಿ ಬಿದ್ದಿದೆ. ಬುಡೋಳಿ ಯೂತ್ ಫೇಡರೇಶನ್ ಸದಸ್ಯರು ಮತ್ತು ಸೈಲೆಂಟ್ ಫ್ರೆಂಡ್ಸ್ ಬುಡೋಳಿ ಸದಸ್ಯರು ಕಾರ್ಯಾಚರಣೆ ನಡೆಸಿ ಕಾರಿನೊಳಗಡೆ ಸಿಕ್ಕಿಹಾಕಿಕೊಂಡಿರುವ ಪ್ರಯಾಣಿಕರನ್ನು ಹೊರ ತೆಗೆದಿದ್ದಾರೆ. ಈ ಅಪಾಯಕಾರಿ ಜಾಗದ ಬಗ್ಗೆ ಹಲವಾರು ಬಾರಿ ಮಾಧ್ಯಮಗಳಲ್ಲಿ ವರದಿ ಪ್ರಕಟಗೊಂಡಿತ್ತು. ಕಳೆದ ಕೆಲವು ದಿನಗಳಿಂದ ಇಲ್ಲಿ ಹೆದ್ದಾರಿ ಕಾಮಗಾರಿಯೂ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ವೇಗನಿಯಂತ್ರಣವನ್ನು ಕಾಪಾಡದೇ ಇದ್ದರೆ ಅಪಘಾತ ಇಲ್ಲಿ ಸಂಭವಿಸುವ ಅಪಾಯವಿರುವುದನ್ನು ಮಾಧ್ಯಮಗಳು ಎಚ್ಚರಿಸಿದ್ದವು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ