ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನದಲ್ಲಿ ಕಲಶಾಭಿಷೇಕ ಸಂಭ್ರಮ

ಬಂಟ್ವಾಳ: ಬಂಟ್ವಾಳ ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಫೆ. ೨೦ರಂದು ಅಮ್ಮನವರಿಗೆ ಪೊಳಲಿ ಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ನೂರಾರು ಭಕ್ತ ಸಮುದಾಯದ ಸಮ್ಮುಖ ವಿವಿಧ ಪೂಜಾ ವಿಧಿ-ವಿಧಾನಗಳ ಮೂಲಕ ವಿದ್ಯುಕ್ತವಾಗಿ ಕಲಾಶಭಿಷೇಕ’ನಡೆಯಿತು.

ಕ್ಷೀರ, ಜಲ, ತುಪ್ಪ ಮತ್ತಿತರ ಪರಿಶುದ್ಧ ಅವಿಸ್ಸುಗಳಿಂದ ದೇವರಿಗೆ ಅಭಿಷೇಕ ನಡೆಯುತ್ತಿದ್ದಾಗ, ನೆರೆದಿದ್ದ ಭಕ್ತರು ಅಮ್ಮನವರಿಗೆ ಜಯಘೋಷ ಹಾಕಿದರು. ನಿರಂತರ ವಾದ್ಯಷೋಷ, ಓಲಗ, ಬ್ಯಾಂಡ್ ನಾದ ಕಂಡುಬಂತು. ಪೂಜೆ ವೇಳೆ ದೇವಳದ ಒಳಾಂಗಣ ಮತ್ತು ಹೊರಾಂಗಣದಲ್ಲಿ ನೆರೆದಿದ್ದ ನೂರಾರು ಭಕ್ತರು ಅಮ್ಮನವರ ಪೂಜಾ ವಿಧಿ-ವಿಧಾನ ಕಣ್ತುಂಬಿಸಿಕೊಂಡರು. ಒಂದಡೆ ಸಾಲಲ್ಲಿ ನಿಂತಿದ್ದ ಭಕ್ತಗಡಣ ಸರ್ವಾಂಲಕೃತಭೂಷಿತೆಯಾಗಿದ್ದ ಶ್ರೀ ರಾಜರಾಜೇಶ್ವರಿಯನ್ನು ಮತ್ತಷ್ಟು ಹತ್ತಿರದಿಂದ ಕಾಣಲು ನಿಂತಿದ್ದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಮಾಜಿ ಸಚಿವ ಬಿ. ರಮಾನಾಥ ರೈ, ಜಿಪಂ ಸದಸ್ಯ ತುಂಬೆ ಚಂದ್ರಪ್ರಕಾಶ್ ಶೆಟ್ಟಿ, ತಾಪಂ ಸದಸ್ಯ ಯಶವಂತ ಪೂಜಾರಿ, ಕರಿಯಂಗಳ ಗ್ರಾಪಂ ಅಧ್ಯಕ್ಷ ಚಂದ್ರಹಾಸ ಪಲ್ಲಿಪಾಡಿ, ದೇವಳದ ಆಡಳಿತ ಮೊಕ್ತೇಸರ ಅಮ್ಮುಂಜೆಗುತ್ತು ಡಾ. ಮಂಜಯ್ಯ ಶೆಟ್ಟಿ, ಆನುವಂಶಿಕ ಮೊಕ್ತೇಸರರಾದ ಯು. ತಾರಾನಾಥ ಆಳ್ವ, ಚೇರ ಸೂರ್ಯನಾರಾಯಣ ರಾವ್, ಪವಿತ್ರಪಾಣಿ ಮಾಧವ ಭಟ್, ಅರ್ಚಕರಾದ ನಾರಾಯಣ ಭಟ್, ಪರಮೇಶ್ವರ ಭಟ್, ಕೆ. ನಾರಾಯಣ ಭಟ್, ಕಾರ್ಯನಿರ್ವಹಣಾಧಿಕಾರಿ ಪಿ.ಜಯಮ್ಮ, ಪ್ರಮುಖರಾದ ಸುಭಾಸ್ ನಾಕ್ ಉಳಿಪಾಡಿಗುತ್ತು, ಕೃಷ್ಣಕುಮಾರ್ ಪೂಂಜ, ಅರುಣ್ ಆಳ್ವ ಹಾಗೂ ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಕ್ಷೇತ್ರದ ಪ್ರಮುಖರು ಪಾಲ್ಗೊಂಡರು.

ಫೆ. ೧೩ರಿಂದ ದೇವಸ್ಥಾನದ ಒಳಾಂಗಣದಲ್ಲಿ ಹೋಮ, ಹವನಾದಿಗಳು ನಡೆಂiತ್ತಿದ್ದು, ಫೆ. ೨೦ರಂದೂ ಈ ಪೂಜಾ ವಿಧಿ-ವಿಧಾನಗಳು ಮುಂದುವರಿಯಿತು. ಒಳಾಂಗಣದಲ್ಲಿ ಎಳೆಯಲು ಕಿರು ರಥ ಸಿದ್ಧಗೊಂಡಿದೆ. ಅತ್ತ ಚೆಂಡಿನ ಗದ್ದೆಯಲ್ಲಿ ನಿರಂತರ ಫಲಾಹಾರ ಹಾಗೂ ಊಟೋಪಚಾರ ಮುಂದುವರಿದಿದ್ದು, ಸ್ವಯಂ-ಸೇವಕರು ಕಿಂಚಿತ್ತೂ ನ್ಯೂನತೆ ಬರದಂತೆ ಭಕ್ತರ ಸೇವೆಯಲ್ಲಿ ನಿರತರಾಗಿದ್ದಾರೆ. ಎಂದಿನಂತೆ ಈ ಬಾರಿಯೂ ದೇವಸ್ಥಾನದ ಸುತ್ತಲ ಪರಿಸರದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಬೆಳಿಗ್ಗೆ ೮:೪೦ಕ್ಕೆ ಆರಂಭಗೊಂಡ ಕಳಶಾಭಿಷೇಕಪೂಜಾ ಕಾರ್ಯಕ್ರಮದ ವೇಳೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಮಾಜಿ ಸಚಿವ ಬಿ. ರಮಾನಾಥ ರೈ, ಪಾಲ್ಗೊಂಡರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನದಲ್ಲಿ ಕಲಶಾಭಿಷೇಕ ಸಂಭ್ರಮ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*