ನೇರಳಕಟ್ಟೆಯಲ್ಲಿ ಒಡಿಯೂರು ಜ್ಞಾನವಾಹಿನಿ ಸರಣಿ ಕಾರ್ಯಕ್ರಮಗಳಿಗೆ ಚಾಲನೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಾಣಿ ವಲಯ ಸಮಿತಿ ವತಿಯಿಂದ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅವರ ಷಷ್ಟ್ಯಬ್ಧ ಸಂಭ್ರಮ ಹಿನ್ನೆಲೆಯಲ್ಲಿ ಮಾಣಿ, ಪೆರಾಜೆ, ಅನಂತಾಡಿ, ನೆಟ್ಲಮುಡ್ನೂರು, ಬರಿಮಾರು, ಕಡೇಶಿವಾಲಯ, ಕೆದಿಲ, ಪೆರ್ನೆ ಹಾಗೂ ಬಿಳಿಯೂರು ಭಾಗಗಳ ಜ್ಞಾನವಾಹಿನಿ ಸರಣಿ ಕಾರ್ಯಕ್ರಮಗಳಿಗೆ ನೇರಳಕಟ್ಟೆ ಶ್ರೀ ಗಣೇಶೋತ್ಸವ ಸಮಿತಿ ಗಣೇಶ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು.

ಈ ಸಂದರ್ಭ ಆಶೀರ್ವಚನ ನೀಡಿದ ಒಡಿಯೂರು ಶ್ರೀ ಗುರುದೇವಾನಂದ ಶ್ರೀಗಳು,  ಮರ್ಯಾದಾ ಪುರುಷ ಶ್ರೀ ರಾಮನ ಆದರ್ಶಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ನಾವು ಉತ್ತಮ ಸಂಸ್ಕಾರಗಳನ್ನು ಅನುಭವಿಸುವುದರೊಂದಿಗೆ ಸುಖೀ ಜೀವನವನ್ನು ನಡೆಸಬಹುದು ಎಂದರು. ಷಷ್ಠ್ಯಬ್ದ ಸಂಭ್ರಮದ ಕೇಂದ್ರ ಸಮಿತಿಯ ಅಧ್ಯಕ್ಷರಾದ ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕೇಂದ್ರ ಸಮಿತಿಯ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ ರಂಗೋಲಿ, ಕೋಶಾಧಿಕಾರಿ ಸುರೇಶ ರೈ ಮಕರಜ್ಯೋತಿ, ತಾಲೂಕು ಸಮಿತಿಯ ಅಧ್ಯಕ್ಷರಾದ ಜಗನ್ನಾಥ ಚೌಟ ಬದಿಗುಡ್ಡೆ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಡಾ. ಎಸ್.ಪಿ. ಗುರುದಾಸ್ ಮಂಗಳೂರು ಇವರಿಂದ ಹರಿಕಥಾ ಸತ್ಸಂಗ ಹನೂಮಭಕ್ತಿ ನಡೆಯಿತು.

ಜಾಹೀರಾತು

ನೇರಳಕಟ್ಟೆ ಗಣೇಶೋತ್ಸವ ಸಮಿತಿಯ ಉಪಾಧ್ಯಕ್ಷರಾದ ರಾಮಚಂದ್ರ ಮಾಸ್ಟರ್, ಕಾರ್ಯದರ್ಶಿ ವಿಠಲ ನಾಯ್ಕ್, ವಲಯ ಸಮಿತಿಯ ಕಾರ್ಯಾಧ್ಯಕ್ಷ ಸನತ್ ರೈ, ಸಂಘಟನಾ ಕಾರ್ಯದರ್ಶಿ ಪುಷ್ಪರಾಜ ಹೆಗ್ಡೆ ಸತ್ತಿಕಲ್ಲು, ಕೋಶಾಧಿಕಾರಿ ಬೇಬಿ ನಾಯ್ಕ್ ನೇರಳಕಟ್ಟೆ ಮತ್ತಿತರರು ಉಪಸ್ಥಿತರಿದ್ದರು.ವಲಯ ಸಮಿತಿಯ ಅಧ್ಯಕ್ಷ ಉಗ್ಗಪ್ಪ ಶೆಟ್ಟಿ, ಕೊಂಬಿಲ ಸ್ವಾಗತಿಸಿ,  ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಆಳ್ವ, ಕೊಡಾಜೆ ವಂದಿಸಿದರು. ನರಸಿಂಹ ಶೆಟ್ಟಿ ಮಾಣಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ನೇರಳಕಟ್ಟೆಯಲ್ಲಿ ಒಡಿಯೂರು ಜ್ಞಾನವಾಹಿನಿ ಸರಣಿ ಕಾರ್ಯಕ್ರಮಗಳಿಗೆ ಚಾಲನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*