ಬಂಟ್ವಾಳ: ಬಿ.ಸಿ.ರೋಡಿನ ಗೋಲ್ಡನ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ಕರಾವಳಿ ಕಲೋತ್ಸವದ ಅಮ್ಯೂಸ್ ಮೆಂಟ್ ಪಾರ್ಕಿನ ಒಳಗೆ ಸಾಹಸ ಪ್ರದರ್ಶನ ನೀಡುತ್ತಿದ್ದ ಮರಣಬಾವಿ ಸಾಹಸಿಗಳನ್ನು ಜೆಸಿಐ ಬಂಟ್ವಾಳದ ವತಿಯಿಂದ ಸನ್ಮಾನಿಸಲಾಯಿತು.
ಜನರಿಗೆ ಮನೋರಂಜನೆ ನೀಡುವ ಉದ್ದೇಶದಿಂದ ಬೈಕ್ ಕಸರತ್ತು ಮಾಡುತ್ತಿದ್ದ ಮಹಾರಾಷ್ಟ್ರ ಮೂಲದ 6 ಮಂದಿ ಸಾಹಸಿಗಳ ಪ್ರತಿಭೆಯನ್ನು ಗುರುತಿಸಿ ಜೆಸಿಐ ಬಂಟ್ವಾಳದ ಅಧ್ಯಕ್ಷ ಉಮೇಶ್ ಆರ್. ಮೂಲ್ಯ ಅವರು ಗೌರವಿಸಿದರು. ಈ ಸಂದರ್ಭ ಸದಸ್ಯರಾದ ನಾಗೇಶ್ ಬಾಳೆಹಿತ್ಲು, ಸದಾನಂದ ಬಂಗೇರ, ಲೋಕೇಶ್ ಸುವರ್ಣ, ಡಾ. ಬಾಲಕೃಷ್ಣ, ಗಣೇಶ್ ಕುಲಾಲ್, ಕಿಶೋರ್ ಆಚಾರ್ಯ, ಶಶಾಂಕ್ ಹಾಗೂ ಯುನೈಟೆಡ್ ಟಿವಿಎಸ್ ನ ಸದಸ್ಯರು ಉಪಸ್ಥಿತರಿದ್ದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಮರಣಬಾವಿ ಆಟದ ಸಾಹಸಿಗಳಿಗೆ ಬಂಟ್ವಾಳದಲ್ಲಿ ಜೇಸಿ ಬಂಟ್ವಾಳ ವತಿಯಿಂದ ಸನ್ಮಾನ"
Be the first to comment on "ಮರಣಬಾವಿ ಆಟದ ಸಾಹಸಿಗಳಿಗೆ ಬಂಟ್ವಾಳದಲ್ಲಿ ಜೇಸಿ ಬಂಟ್ವಾಳ ವತಿಯಿಂದ ಸನ್ಮಾನ"