ಬಂಟ್ವಾಳ: ಬಿ.ಸಿ.ರೋಡಿನ ಗೋಲ್ಡನ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ಕರಾವಳಿ ಕಲೋತ್ಸವದ ಅಮ್ಯೂಸ್ ಮೆಂಟ್ ಪಾರ್ಕಿನ ಒಳಗೆ ಸಾಹಸ ಪ್ರದರ್ಶನ ನೀಡುತ್ತಿದ್ದ ಮರಣಬಾವಿ ಸಾಹಸಿಗಳನ್ನು ಜೆಸಿಐ ಬಂಟ್ವಾಳದ ವತಿಯಿಂದ ಸನ್ಮಾನಿಸಲಾಯಿತು.
ಜನರಿಗೆ ಮನೋರಂಜನೆ ನೀಡುವ ಉದ್ದೇಶದಿಂದ ಬೈಕ್ ಕಸರತ್ತು ಮಾಡುತ್ತಿದ್ದ ಮಹಾರಾಷ್ಟ್ರ ಮೂಲದ 6 ಮಂದಿ ಸಾಹಸಿಗಳ ಪ್ರತಿಭೆಯನ್ನು ಗುರುತಿಸಿ ಜೆಸಿಐ ಬಂಟ್ವಾಳದ ಅಧ್ಯಕ್ಷ ಉಮೇಶ್ ಆರ್. ಮೂಲ್ಯ ಅವರು ಗೌರವಿಸಿದರು. ಈ ಸಂದರ್ಭ ಸದಸ್ಯರಾದ ನಾಗೇಶ್ ಬಾಳೆಹಿತ್ಲು, ಸದಾನಂದ ಬಂಗೇರ, ಲೋಕೇಶ್ ಸುವರ್ಣ, ಡಾ. ಬಾಲಕೃಷ್ಣ, ಗಣೇಶ್ ಕುಲಾಲ್, ಕಿಶೋರ್ ಆಚಾರ್ಯ, ಶಶಾಂಕ್ ಹಾಗೂ ಯುನೈಟೆಡ್ ಟಿವಿಎಸ್ ನ ಸದಸ್ಯರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮರಣಬಾವಿ ಆಟದ ಸಾಹಸಿಗಳಿಗೆ ಬಂಟ್ವಾಳದಲ್ಲಿ ಜೇಸಿ ಬಂಟ್ವಾಳ ವತಿಯಿಂದ ಸನ್ಮಾನ"