ಒನಕೆ ಓಬವ್ವ, ಸ್ಥಳೀಯ ಚರಿತ್ರೆ: ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರದಲ್ಲಿ ವಿಶೇಷ ಉಪನ್ಯಾಸ

ಬಂಟ್ವಾಳ: ಬಿ.ಸಿ.ರೋಡಿನ ಸಂಚಯಗಿರಿಯಲ್ಲಿರುವ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಒನಕೆ ಓಬವ್ವ ಅಧ್ಯಯನ ಪೀಠ ಹಾಗೂ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಒನಕೆ ಓಬವ್ವ ಮತ್ತು ಸ್ಥಳೀಯ ಚರಿತ್ರೆ ಎಂಬ ಉಪನ್ಯಾಸ ನಡೆಯಿತು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಹಂಪಿ ಕನ್ನಡ ವಿವಿ ಕುಲಪತಿ ಡಾ. ಸ.ಚಿ.ರಮೇಶ್, ಡಾ. ತುಕಾರಾಮ್ ಪೂಜಾರಿಯವರು ಇಡೀ ತುಳುನಾಡಿನ ಚರಿತ್ರೆಯನ್ನು ಈ ವಸ್ತು ಸಂಗ್ರಹಾಲಯದ ಮೂಲಕ ತೆರೆದಿಟ್ಟಿದ್ದಾರೆ ಎಂದರು.

ಸುರತ್ಕಲ್ ಗೋವಿಂದದಾಸ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ| ಬಿ.ವೈ.ಕುಮಾರ್ ಅವರು ವಿಶೇಷ ಉಪನ್ಯಾಸ ನೀಡಿದರು.

ಜಾಹೀರಾತು

ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ.ತುಕಾರಾಮ ಪೂಜಾರಿ ಅವರು ಸ್ಥಳೀಯ ಚರಿತ್ರೆಯ ಕುರಿತು ವಿಚಾರ ತಿಳಿಸಿದರು. ವೇದಿಕೆಯಲ್ಲಿ ಮಂಗಳೂರು ಎಂಆರ್‌ಪಿಎಲ್‌ನ ಸಿಎಸ್‌ಆರ್ ವಿಭಾಗದ ಉಪಮಹಾಪ್ರಬಂಧಕಿ ವೀಣಾ ಶೆಟ್ಟಿ, ಬಂಟ್ವಾಳ ವಿಶೇಷ ಮಕ್ಕಳ ಪಾಲನಾ ಕೇಂದ್ರ ನಿರ್ಮಲ ಹೃದಯದ ಸಂಚಾಲಕ ದಾಮೋದರ್ ಬಿ.ಎಂ. ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪರಿಸರ ಪ್ರೇಮಿ ಎ.ದಾಮೋದರ್, ಪತ್ರಿಕಾ ವಿತರಕ ನರಸಿಂಹ ಪೈ ಅವರನ್ನು ಸಮ್ಮಾನಿಸಲಾಯಿತು. ಹಂಪಿ ಕನ್ನಡ ವಿವಿಯ ಒನಕೆ ಓಬವ್ವ ಅಧ್ಯಯನ ಪೀಠದ ಸಂಚಾಲಕ ಡಾ. ಎ.ಶ್ರೀಧರ್ ಪ್ರಸ್ತಾವನೆಗೈದರು. ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಡಾ. ಆಶಾಲತಾ ಎಸ್.ಸುವರ್ಣ ಸ್ವಾಗತಿಸಿದರು. ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಜಾನಪದ ನೃತ್ಯಗಳನ್ನು ಪ್ರಸ್ತುತ ಪಡಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಒನಕೆ ಓಬವ್ವ, ಸ್ಥಳೀಯ ಚರಿತ್ರೆ: ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರದಲ್ಲಿ ವಿಶೇಷ ಉಪನ್ಯಾಸ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*