ಫರಂಗಿಪೇಟೆ

ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನದಿಂದ ಹೃದಯ ಉಚಿತ ತಪಾಸಣೆ

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಂಟ್ವಾಳ, ರೋಟರಿ ಕ್ಲಬ್ ಬಂಟ್ವಾಳ ಜಂಟಿ ಆಶ್ರಯದಲ್ಲಿ ಜ. ಕೆ.ಎಸ್. ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಸಹಯೋಗದೊಂದಿಗೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಮಾತಾಪಿತರಾದ  ದಿ. ಸರಸ್ವತಿ ಕೆ. ಪೂಂಜಾ ಹಾಗೂ ಕೆ. ಕಾಂತಪ್ಪ ಪೂಂಜ ಫರಂಗಿಪೇಟೆ ಇವರ ಸ್ಮರಣಾರ್ಥ ಉಚಿತ ಹೃದಯ ತಪಾಸಣ ಶಿಬಿರ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ನಡೆಯಿತು.

ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಶಿಬಿರ ಉದ್ಘಾಟಿಸಿದರು. ಅವರು ಮಾತಾನಾಡಿ ಸಮಯಕ್ಕೆ ಸರಿಯಾಗಿ ಹೃದಯ  ಸಹಿತ ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು. ಮುನ್ನೆಚ್ಚರಿಕೆಯಿಂದ ಶೇ. ೮೦ ರಷ್ಟು ಹೃದಯ ರೋಗ ತಡೆಗಟ್ಟಬಹುದು ಎಂದು ತಿಳಿಸಿದರು. ಹೃದಯ ತಜ್ಞ ಡಾ. ಸುಬ್ರಹ್ಮಣ್ಯಂ ಕೆ. ಮಾತನಾಡಿ ನಿಯಮಿತವಾದ ವ್ಯಾಯಮ, ಪ್ರಾಣಾಯಾಮದಿಂದ ಹೃದಯದ ಆರೋಗ್ಯದ ಜೊತೆಗೆ ದೇಹದ ಆರೋಗ್ಯ ಕಾಪಾಡ ಬಹುದಾಗಿದೆ ಎಂದರು. ರೋಟರಿ ನಿಯೋಜಿತ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಮಾತನಾಡಿ ಸಂಪತ್ತು ಗಳಿಸುವುದು ಮುಖ್ಯ ಅಲ್ಲ,  ಇನ್ನೊಬ್ಬರನ್ನು ಸಂಪದ್ಭರಿತ ಗೊಳಿಸುವುದು ಮುಖ್ಯ. ಆರೋಗ್ಯ ನಮ್ಮ ಕೈಯಲ್ಲಿದೆ. ಅದನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ ಎಂದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯಾನಂದ ಮಾತನಾಡಿ ಹತ್ತು ರೋಗಿಯ ಸೇವೆ ಮಾಡಿದರೆ ಅದು ಹತ್ತು ದೇವಸ್ಥಾನಕ್ಕೆ ಹೋದಂತೆ ಎಂದರು. ಅರ್ಕುಳ ಬೀಡು ವಜ್ರನಾಭ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ಕೆ. ನಾರಾಯಣ ಹೆಗ್ಡೆ, ಕಾರ್ಯದರ್ಶಿ ವಾಣಿ ಕಾರಂತ್, ತುಂಬೆ ಗ್ರಾ.ಪಂ. ಅಧ್ಯಕ್ಷ ಪ್ರವೀಣ್ ಬಿ. ತುಂಬೆ, ಪುದು ಗ್ರಾ.ಪಂ. ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಎಸ್‌ಕೆಡಿಆರ್‌ಡಿಪಿ ಮೇಲ್ವಿಚಾರಕಿ ಮಮತಾ, ದಂತತಜ್ಞ ಡಾ. ರಂಜಿತ್ ಶೆಟ್ಟಿ, ಸಂಸ್ಥೆಯ ಪೋಷಕರಾದ ಅರ್ಕುಳ ಝಪ್ರುಲ್ಲಾ ಒಡೆಯರ್ ಉಪಸ್ಥಿತರಿದ್ದರು. ತಾರಾನಾಥ ಕೊಟ್ಟಾರಿ ಸ್ವಾಗತಿಸಿದರು. ಸೇವಾಂಜಲಿ ಪ್ರತಿಷ್ಠಾನ ದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ವಂದಿಸಿದರು. ಕೊಡ್ಮಾಣ್ ದೇವದಾಸ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.