ಬಂಟ್ವಾಳ: ನೇಪಾಳದಲ್ಲಿ ನಡೆದ ಜುಡೋ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿದ ಕಲ್ಲಡ್ಕದ ಯುವ ಪ್ರತಿಭೆಗಳಾದ ನಿಶ್ಚಿತ್ ಕುಮಾರ್ ಮತ್ತು ಧನಂಜಯ ಬಾಳ್ತಿಲ ಅವರನ್ನು ಕಲ್ಲಡ್ಕ ಮ್ಯೂಸಿಯಂ ಮತ್ತು ತ್ರಿವರ್ಣ ಸಂಗಮ ಕಲ್ಲಡ್ಕ ವತಿಯಿಂದ ಶುಕ್ರವಾರ ರಾತ್ರಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಇಬ್ಬರನ್ನೂ ಸನ್ಮಾನಿಸಿ ಮಾತನಾಡಿದ ಕಲ್ಲಡ್ಕ ಮ್ಯೂಸಿಯಂನ ಮಾಲೀಕ ಮೊಹಮ್ಮದ್ ಯಾಸೀರ್, ಕಲ್ಲಡ್ಕದ ಪ್ರತಿಭೆಗಳು ಇಂದು ವಿದೇಶದಲ್ಲಿ ಸ್ಪರ್ಧೆಗಿಳಿದು ವಿಜೇತರಾಗಿ ಚಿನ್ನದ ಪದಕ ಗಳಿಸಿರುವುದು ಗಮನಾರ್ಹ ಸಾಧನೆಯಾಗಿದ್ದು, ಇವರು ಅಭಿನಂದನಾರ್ಹರು. ಜುಡೋ ಸ್ಪರ್ಧೆಯಲ್ಲಿ ಇನ್ನಷ್ಟು ಅಂತಾರಾಷ್ಟ್ರೀಯ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲು ಇಬ್ಬರಿಗೂ ಶಕ್ತಿ ದೊರಕಲಿ, ಇವರ ಸಾಧನೆ, ಪರಿಶ್ರಮಕ್ಕೆ ಮನ್ನಣೆ ನೀಡುವುದು ನಮ್ಮೆಲ್ಲರ ಕರ್ತವ್ಯ ಎಂದು ಶುಭ ಹಾರೈಸಿದರು. ಈ ಸಂದರ್ಭ ಯೋಗೀಶ್, ರಾಜೇಶ್, ಜಗದೀಶ್, ಹನೀಫ್, ಹಿರಿಯರಾದ ಚಂದ್ರಹಾಸ ದಾಸ್ ಮತ್ತು ಇತರರು ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…