ಕಲ್ಲಡ್ಕ

ನೇಪಾಳದಲ್ಲಿ ಜುಡೊ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿದ ಸಾಧಕ ಯುವಕರಿಗೆ ಕಲ್ಲಡ್ಕ ಮ್ಯೂಸಿಯಂನಲ್ಲಿ ಸನ್ಮಾನ

ಸನ್ಮಾನ ಕಾರ್ಯಕ್ರಮ ಕಲ್ಲಡ್ಕದಲ್ಲಿ ನಡೆಯಿತು.
1 / 9

ಬಂಟ್ವಾಳ: ನೇಪಾಳದಲ್ಲಿ ನಡೆದ  ಜುಡೋ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿದ ಕಲ್ಲಡ್ಕದ ಯುವ ಪ್ರತಿಭೆಗಳಾದ ನಿಶ್ಚಿತ್ ಕುಮಾರ್ ಮತ್ತು ಧನಂಜಯ ಬಾಳ್ತಿಲ ಅವರನ್ನು ಕಲ್ಲಡ್ಕ ಮ್ಯೂಸಿಯಂ ಮತ್ತು ತ್ರಿವರ್ಣ ಸಂಗಮ ಕಲ್ಲಡ್ಕ ವತಿಯಿಂದ ಶುಕ್ರವಾರ ರಾತ್ರಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಇಬ್ಬರನ್ನೂ ಸನ್ಮಾನಿಸಿ ಮಾತನಾಡಿದ ಕಲ್ಲಡ್ಕ ಮ್ಯೂಸಿಯಂನ ಮಾಲೀಕ ಮೊಹಮ್ಮದ್ ಯಾಸೀರ್, ಕಲ್ಲಡ್ಕದ ಪ್ರತಿಭೆಗಳು ಇಂದು ವಿದೇಶದಲ್ಲಿ ಸ್ಪರ್ಧೆಗಿಳಿದು ವಿಜೇತರಾಗಿ ಚಿನ್ನದ ಪದಕ ಗಳಿಸಿರುವುದು ಗಮನಾರ್ಹ ಸಾಧನೆಯಾಗಿದ್ದು, ಇವರು ಅಭಿನಂದನಾರ್ಹರು. ಜುಡೋ ಸ್ಪರ್ಧೆಯಲ್ಲಿ ಇನ್ನಷ್ಟು ಅಂತಾರಾಷ್ಟ್ರೀಯ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲು ಇಬ್ಬರಿಗೂ ಶಕ್ತಿ ದೊರಕಲಿ, ಇವರ ಸಾಧನೆ, ಪರಿಶ್ರಮಕ್ಕೆ ಮನ್ನಣೆ ನೀಡುವುದು ನಮ್ಮೆಲ್ಲರ ಕರ್ತವ್ಯ ಎಂದು ಶುಭ ಹಾರೈಸಿದರು. ಈ ಸಂದರ್ಭ ಯೋಗೀಶ್, ರಾಜೇಶ್, ಜಗದೀಶ್, ಹನೀಫ್, ಹಿರಿಯರಾದ ಚಂದ್ರಹಾಸ ದಾಸ್  ಮತ್ತು ಇತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ