ಬಂಟ್ವಾಳ

ಬಂಟ್ವಾಳ ಪುರಸಭೆಯ ಆಸ್ತಿ ತೆರಿಗೆ ದರ ಮರುನಿಗದಿ – ನೀರಿನ ಬಿಲ್ ದರ ಏರಿಕೆ ಇಲ್ಲ

ಪುರಸಭೆಯ ವಿಶೇಷ ಸಭೆಯಲ್ಲಿ ತೀರ್ಮಾನ

ಆಸ್ತಿ ತೆರಿಗೆ ಪರಿಷ್ಕರಣೆಗೆ ಬಂಟ್ವಾಳ ಪುರಸಭೆ ಒಪ್ಪಿಗೆ ಸೂಚಿಸಿದೆ. ಅಧ್ಯಕ್ಷ ಮಹಮ್ಮದ್ ಶರೀಫ್ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ವಿಶೇಷ ಸಭೆಯಲ್ಲಿ ೨೦೨೧- ೨೨ನೇ ಸಾಲಿನಿಂದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪೌರಾಡಳಿತ ನಿರ್ದೇಶಕರ ಸುತ್ತೋಲೆಯಂತೆ  ಆಸ್ತಿ ತೆರಿಗೆಯನ್ನು ಪರಿಷ್ಕರಿಸಿದೆ. ಆಸ್ತಿ ತೆರಿಗೆ  ವಿಚಾರದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಯಾರಿಗೂ ಹೊರೆಯಾಗದ ರೀತಿಯಲ್ಲಿ ಕಡಿಮೆ ಶೇಕಡಾ ದರವನ್ನು ನಿಗದಿಪಡಿಸಲಾಗಿದೆ ಎಂದು ಬಂಟ್ವಾಳ ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್ ಈ ಸಂದರ್ಭ ಹೇಳಿದರು.

ಕರ್ನಾಟಕ ಸರಕಾರವು ಆಸ್ತಿತೆರಿಗೆ ಮತ್ತು ಖಾಲಿ ನಿವೇಶನ ತೆರಿಗೆಯನ್ನು ತಿದ್ದುಪಡಿ ಮಾಡಲು ಈಗಾಗಲೇ ಸರಕಾರದ ಮಟ್ಟದಲ್ಲಿ ಪುರಸಭಾ ಕಾಯ್ದೆ ತಿದ್ದುಪಡಿ ಮಾಡಿ ಗಜೆಟ್ ನೋಟಿಫಿಕೇಶನ್ ಪ್ರಚಾರ ಪಡಿಸಿ ಈ ಹಿಂದಿನ ತೆರಿಗೆ ಪದ್ದತಿಯನ್ನು ರದ್ದುಪಡಿಸಿರುವುದರಿಂದ ಆಯಾ ಪ್ರದೇಶದ ಆಸ್ತಿತೆರಿಗೆಯ ಶೇಕಡಾವಾರು ನಿಗದಿಪಡಿಸಲು ಆಯಾಸ್ಥಳೀಯ ಸಂಸ್ಥೆಗಳು ಕ್ರಮಕೈಗೊಳ್ಳಬೇಕಾಗಿದೆ ಎಂದು ಸುತ್ತೋಲೆ ಹೊರಡಿಸಲಾಗಿದೆ ಅದರಂತೆ ಈ ಬಗ್ಗೆ ಬಂಟ್ವಾಳ ಪುರಸಭೆಯ ವಿಶೇಷ ಸಭೆಯನ್ನು  ಕರೆದನ್ವಯ ವಾಸ್ತವ್ಯ ಉದ್ದೇಶ ಶೇ. 0.6, ವಾಣಿಜ್ಯ ಉದ್ದೇಶ ಶೇ.1, ಖಾಲಿ ನಿವೇಶನಕ್ಕೆ ಶೇ. 0.2 ಆಸ್ತಿತೆರಿಗೆ ವಿಧಿಸಲು ತೀರ್ಮಾನ ಕೈಗೊಳ್ಳಲಾಗಿದೆ, ಇದು ಸರಕಾರದ ಗೈಡ್ ಲೈನ್ಸ್ ಆದ ಕಾರಣ ಎಲ್ಲಾ ಸ್ಥಳೀಯ ಸಂಸ್ಥೆಗಳ0ತೆ ನಮ್ಮ ಪುರಸಭೆ ಯಲ್ಲಿ ಕೂಡ ಜಾರಿಗೊಳಿಸಲಾಗಿದೆ ಎಂದವರು ಹೇಳಿದರು. ನೀರಿನ ದರ ಪರಿಷ್ಕರಣೆಯನ್ನು ಸದ್ಯಕ್ಕೆ ತಡೆಹಿಡಿದಿದ್ದು, ಯಥಾಸ್ಥಿತಿಯಲ್ಲಿ ಮುಂದುವರಿಯಲು  ನಿರ್ಣಯಿಸಲಾಯಿತು.

ಜಾಹೀರಾತು

ತೆರಿಗೆ ಪರಿಷ್ಕರಣೆ ಕುರಿತು ಎಸ್.ಡಿ.ಪಿ.ಐ. ವಿರೋಧ ವ್ಯಕ್ತಪಡಿಸಿ ಲಿಖಿತ ಪತ್ರವನ್ನೂ ನೀಡಿತು. ಎಸ್.ಡಿ.ಪಿ.ಐ. ಸದಸ್ಯೆ ಝೀನತ್ ಫಿರೋಜ್ ತೆರಿಗೆ ಹೆಚ್ಚಳವನ್ನು ಬಲವಾಗಿ ಆಕ್ಷೇಪಿಸಿ,ಇದನ್ನು ನಾವು ಒಪ್ಪಲು ಸಾಧ್ಯವಿಲ್ಲ ಎಂದು ತಮ್ಮ ಪಕ್ಷದ ಪರವಾಗಿ ಲಿಖಿತ ವಿರೋಧ ದಾಖಲಿಸಿದರು.  ನೀರಿನ ದರ ಪರಿಷ್ಕರಣೆ ಕುರಿತಂತೆ  ಶಾಸಕ ರಾಜೇಶ್ ನಾಯ್ಕ್ ಅವರು ಆಡಳಿತಾಧಿಕಾರಿಯವರ ಕಾಲದಲ್ಲಿ  ನೀರಿನ ದರ ಏರಿಕೆಯನ್ನು ತಡೆ ಹಿಡಿಯುವಂತೆ ಸಹಾಯಕ ಕಮಿಷನರ್ ಗೆ ಬರೆದಿರುವ ಪತ್ರದ ಆಧಾರದಲ್ಲಿಯೇ ಎರಡನೇ ಹಂತದ ಕುಡಿಯುವ ನೀರಿನ ಕಾಮಗಾರಿ ಪೂರ್ಣಗೊಂಡ  ಬಳಿಕ ದರ ಪರಿಷ್ಕರಿಸಲು ನಿರ್ಣಯ ಕೈಗೊಳ್ಳಲಾಯಿತು.

ಪುರಸಭೆಯ ಸಿಬ್ಬಂದಿಗಳನ್ನು ಬಿಪಿಎಲ್ ಪಡಿತರ,ಶಿಕ್ಷಣ ವಂಚಿತ ಮಕ್ಕಳ ಸರ್ವೇ ಸಹಿತ ಅನ್ಯ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದಕ್ಕೆ ಸದಸ್ಯರು ತೀವ್ರವಾಗಿ  ಆಕ್ಷೇಪಿಸಿದರು. ಕಂಚಿನಡ್ಕಪದವಿನಲ್ಲಿ ತ್ಯಾಜ್ಯ ಸಂಸ್ಕರಣೆ ವಿಚಾರ ಮತ್ತೆ ಪ್ರತಿಧ್ವನಿಸಿತು.  ಉಪಾಧ್ಯಕ್ಷೆ ಜೆಸಿಂತಾ ಡಿಸೋಜ, ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ ವೇದಿಕೆಯಲ್ಲಿದ್ದರು.  ಸದಸ್ಯರಾದ ಎ.ಗೋವಿಂದ ಪ್ರಭು, ಪಿ. ರಾಮಕೃಷ್ಣ ಆಳ್ವ, ಹರಿಪ್ರಸಾದ್, ಮೊಹಮ್ಮದ್ ನಂದರಬೆಟ್ಟು, ವಿದ್ಯಾವತಿ, ಅಬುಬಕ್ಕರ್ ಸಿದ್ದೀಕ್ ಗುಡ್ಡೆಯಂಗಡಿ, ಲುಕ್ಮಾನ್, ಶಶಿಕಲಾ, ಮೊನೀಶ್ ಆಲಿ ಮೊದಲಾದವರು ವಿವಿಧ ವಿಷಯಗಳ ಕುರಿತು ಮಾತನಾಡಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ