ಬಂಟ್ವಾಳ

ರೋಟರಿ ಟೌನ್ ನಿಂದ ನಾಟಿವೈದ್ಯೆ ಮೀನಾಕ್ಷಿ ಆಚಾರ್ಯ ಅವರಿಗೆ ಸನ್ಮಾನ

ಬಂಟ್ವಾಳ: ಜನಸೇವೆಯೇ ಜನಾರ್ದನಸೇವೆ ಎಂಬ ತತ್ವದಡಿ 84ರ ಹರೆಯದ ನಾಟಿವೈದ್ಯೆ ಮೀನಾಕ್ಷಿ ಆಚಾರ್ಯ ಅವರು ಬಂಟ್ವಾಳದಲ್ಲಿ ಸೇವಾಕಾರ್ಯವನ್ನು ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಬಂಟ್ವಾಳದ ರೋಟರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರನ್ನು ಸನ್ಮಾನಿಸಿತು. ರೋಟರಿ ಟೌನ್ ಅಧ್ಯಕ್ಷ ಪದ್ಮನಾಭ ರೈ, ಕಾರ್ಯದರ್ಶಿ ಕಿಶೋರ್ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆನ್ಸ್ ಕ್ಲಬ್ ಅಧ್ಯಕ್ಷೆ ಸವಿತಾ ಚಿತ್ತರಂಜನ್ ನೇತೃತ್ವದಲ್ಲಿ ಸನ್ಮಾನ ಕಾರ್ಯಕ್ರಮ ನೆರವೇರಿತು. ಈ ಸಂದರ್ಭ ಜತೆಕಾರ್ಯದರ್ಶಿ ಜಶ್ಮಿ ಕಿಶೋರ್, ಖಜಾಂಚಿ ವಿದ್ಯಾ ಉಮೇಶ್ ಉಪಸ್ಥಿತರಿದ್ದರು.

ಬಂಟ್ವಾಳ ಅಗ್ರಬೈಲು ನಾರಾಯಣ ಆಚಾರ್ಯ ರವರ ಪತ್ನಿ ಮೀನಾಕ್ಷಿ ಆಚಾರ್ಯ ಸುಮಾರು 5,000 ಕ್ಕೂ ಹೆಚ್ಚು ರೋಗಿಗಳನ್ನು ಗುಣಪಡಿಸಿದವರು. ಸರ್ಪಸುತ್ತು, ಕೆಂಪು, ಧೃಷ್ಟಿ ಬೊಕ್ಕೆ ಮುಂತಾದ ಅನೇಕ ರೋಗಗಳಿಗೆ ಗಿಡಮೂಲಿಕೆ ಔಷಧಿ ನೀಡುವುದರ ಮೂಲಕ ಚಿಕಿತ್ಸೆ ಮಾಡುತ್ತಿದ್ದಾರೆ.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.