ಬಂಟ್ವಾಳ: ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ನಾಡೋಜ ಡಾ. ಮಹೇಶ್ ಜೋಷಿ ಅವರು ಬಂಟ್ವಾಳದ ಕೈಕುಂಜೆಯಲ್ಲಿರುವ ಕನ್ನಡ ಭವನಕ್ಕೆ ಭೇಟಿ ನೀಡಿ ತಾನು ಅಧ್ಯಕ್ಷನಾದರೆ ಕೈಗೊಳ್ಳುವ ಕಾರ್ಯಯೋಜನೆಗಳ ಮಾಹಿತಿಯನ್ನು ಕಸಾಪ ಸದಸ್ಯರಿಗೆ ನೀಡಿದರು.
ಈ ಸಂದರ್ಭ ಕನ್ನಡ ಸಾಹಿತ್ಯ ಪರಿಷತ್ತಿನ ಬಂಟ್ವಾಳ ತಾಲೂಕು ಘಟಕಾಧ್ಯಕ್ಷ ಕೆ.ಮೋಹನ ರಾವ್ ಅವರನ್ನು ಸನ್ಮಾನಿಸಲಾಯಿತು. ಮೋಹನ ರಾವ್ ಹಾಗೂ ನಿಕಟಪೂರ್ವ ಅಧ್ಯಕ್ಷ ಜಯಾನಂದ ಪೆರಾಜೆ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯನಿರ್ವಹಣೆಯ ಕುರಿತು ವಿಚಾರ ಮಂಡಿಸಿದರು. ಕಸಾಪ ತಾಲೂಕು ಗೌರವ ಪ್ರಧಾನ ಕಾರ್ಯದರ್ಶಿ ರವೀಂದ್ರ ಕುಕ್ಕಾಜೆ ವೇದಿಕೆಯಲ್ಲಿದ್ದರು. ಕಸಾಪ ಹಿರಿಯ ಸದಸ್ಯರು ಈ ಸಂದರ್ಭ ಉಪಸ್ಥಿತರಿದ್ದು ಪೂರಕ ಮಾಹಿತಿಯನ್ನು ನೀಡಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಡಾ. ಮಹೇಶ್ ಜೋಷಿ ಕನ್ನಡ ಭವನಕ್ಕೆ ಭೇಟಿ"