ಜಿಲ್ಲಾ ಸುದ್ದಿ

ರಾಜ್ಯಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಅನಘಾಗೆ ಎರಡು ಚಿನ್ನ ಒಂದು ಬೆಳ್ಳಿ ಪದಕ:ರಾಷ್ಟ ಮಟ್ಟಕ್ಕೆ ಆಯ್ಕೆ

ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ವತಿಯಿಂದ ಮೈಸೂರಿನಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ 36ನೇ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಮಂಗಳೂರಿನ ಅನಘಾ ಎರಡು ಚಿನ್ನದ ಪದಕ ಹಾಗೂ ಒಂದು ಬೆಳ್ಳಿ ಪದಕ ಪಡೆದು ರಾಷ್ಟ್ರಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾಗಿದ್ದಾರೆ.

ಮೈಸೂರಿನ ರಾವ್ಸ್ ಸ್ಕೇಟಿಂಗ್ ರಿಂಕ್ ನಲ್ಲಿ ಮಾರ್ಚ್ 4 ರಿಂದ 7 ರವರೆಗೆ ನಡೆದ ಸ್ಕೇಟಿಂಗ್ ಚಾಂಪಿಯನ್ ಶಿಪ್ ನ 9 ರಿಂದ 11 ವರ್ಷದ ಬಾಲಕಿಯರ ವಿಭಾಗದಲ್ಲಿ 1ಲ್ಯಾಪ್ ರೋಡ್ ರೇಸ್ ಹಾಗೂ 1,000 ಮೀಟರ್ ರಿಂಕ್ ರೇಸ್ ನಲ್ಲಿ ತಲಾ ಎರಡು ಚಿನ್ನದ ಪದಕ ಹಾಗೂ 500 ಮೀಟರ್ ರಿಂಕ್ ರೇಸ್ ನಲ್ಲಿ ಬೆಳ್ಳಿ ಪದಕ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಪಂಜಾಬ್ ನ ಮೊಹಾಲಿಯಲ್ಲಿ ಎಪ್ರಿಲ್1 ರಿಂದ 4 ರವರೆಗೆ ನಡೆಯಲಿರುವ ರಾಷ್ಟ್ರೀಯ ಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಅನಘಾ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.

ಮಂಗಳೂರಿನ ಕದ್ರಿ ಹಿಲ್ಸ್ ನಿವಾಸಿ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ಅವರ ಪುತ್ರಿಯಾದ ಅನಘಾ ಬಿಜೈ ಲೂರ್ಡ್ಸ್ ಸೆಂಟ್ರಲ್‌ ಸ್ಕೂಲ್ ನ 5 ನೇ ತರಗತಿ ವಿದ್ಯಾರ್ಥಿನಿ.

ಜಾಹೀರಾತು

ಮಂಗಳೂರಿನ ಹೈಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ನ ಸದಸ್ಯೆಯಾಗಿರುವ ಅನಘಾ ತರಬೇತುದಾರರಾದ ಮೋಹನ್ ದಾಸ್.ಕೆ ಹಾಗೂ ಜಯರಾಜ್ ತರಬೇತಿ ಪಡೆಯುತ್ತಿದ್ದು, ಬೆಂಗಳೂರಿನ ತರಬೇತುದಾರರಾದ ಏಕಲವ್ಯ ಪ್ರಶಸ್ತಿ ವಿಜೇತ ಪ್ರತೀಕ್ ರಾಜ ಅವರಿಂದ ಹೆಚ್ಚಿನ‌ ತರಬೇತಿ ಪಡೆಯುತ್ತಿದ್ದಾರೆ

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts