ಬಂಟ್ವಾಳ

ಬಿ.ಸಿ.ರೋಡಿನ ಉದ್ಯಮಿ ದಾಮೋದರ ರಾವ್ ನಿಧನ

ಬಂಟ್ವಾಳ: ಸುದೀರ್ಘ ವರ್ಷಗಳ ಕಾಲ ಬಿ.ಸಿ.ರೋಡಿನ ಧಾರ್ಮಿಕ ಚಟುವಟಿಕೆಗಳ ರೂವಾರಿಯಾಗಿದ್ದ ಉದ್ಯಮಿ ದಾಮೋದರ ರಾವ್ (78) ಶನಿವಾರ ನಿಧನಹೊಂದಿದರು. ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರ ಸಹಿತ ಬಂಧು ವರ್ಗವನ್ನು ಅವರು ಅಗಲಿದ್ದಾರೆ. ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನದ ಸೇವಾ ಸಮಿತಿಯ ಅಧ್ಯಕ್ಷರಾಗಿ ಸುದೀರ್ಘ ಅವಧಿಯಲ್ಲಿ ಸೇವೆ ಸಲ್ಲಿಸಿದ್ದ ಅವರು, ಕೈಕುಂಜೆಯಲ್ಲಿ ಹಿಂದು ರುದ್ರಭೂಮಿಯನ್ನು ನಿರ್ಮಾಣ ಮಾಡುವಲ್ಲಿ ಶ್ರಮಿಸಿದ್ದರು. ಬಿ.ಸಿ.ರೋಡಿನ ಕೈಕುಂಜೆ ಪೂರ್ವ ಬಡಾವಣೆಯಲ್ಲಿರುವ ಕೈಕುಂಜೆ ಅಭಿವೃದ್ಧಿ ಸಂಘದ ಅಧ್ಯಕ್ಷರಾಗಿ ಗುರುತಿಸಿಕೊಂಡಿದ್ದರು. ಬ್ಯಾಗು ತಯಾರಿಕಾ ಉದ್ಯಮವನ್ನು ಬಿ.ಸಿ.ರೋಡಿನಲ್ಲಿ ನಡೆಸುತ್ತಿದ್ದ ಅವರು  ಬಿ.ಸಿ.ರೋಡಿನಲ್ಲಿ ಎಸ್.ಆರ್. ಕಾಂಪ್ಲೆಕ್ಸ್ ನಿರ್ಮಿಸುವ ಮೂಲಕ ಬಹುಮಹಡಿಯ ವಾಣಿಜ್ಯ ಸಂಕೀರ್ಣವನ್ನು ದಶಕಗಳ ಹಿಂದೆಯೇ ನಿರ್ಮಿಸಿ ಗಮನ ಸೆಳೆದಿದ್ದರು. ಸಮಾಜಸೇವಕರಾಗಿ, ಕೊಡುಗೈ ದಾನಿಯಾಗಿ ಗುರುತಿಸಿಕೊಂಡಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ