ನಾಟಕ

ಮಂಚಿಯ ನೂಜಿಬೈಲು ಶಾಲೆಯಲ್ಲಿ ಬಿ.ವಿ.ಕಾರಂತ ನೆನಪಿಗೆ ಮೂರು ದಿನಗಳ ನಾಟಕೋತ್ಸವ

19ರಂದು ಚಾಣಕ್ಯಪ್ರಪಂಚ, 20ರಂದು ಹಕ್ಕಿಕತೆ, 21ರಂದು ಅಬ್ಬಲ್ಲಿಗೆ ಪ್ರದರ್ಶನ

ಬಂಟ್ವಾಳ: ಮಾರ್ಚ್ 19ರಿಂದ 21ರವರೆಗೆ ಸಂಜೆಯ ಬಳಿಕ ಮೂರು ದಿನಗಳ ಕಾಲ ಮಂಚಿ ನೂಜಿಬೈಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಬಿ.ವಿ.ಕಾರಂತ ನೆನಪಿನ ನಾಟಕೋತ್ಸವ ನಡೆಯಲಿದೆ ಎಂದು ಬಿ.ವಿ.ಕಾರಂತ ರಂಗಭೂಮಿಕಾ ಟ್ರಸ್ಟ್ ಅಧ್ಯಕ್ಷ ನ್ಯಾಯವಾದಿ ಕಜೆ ರಾಮಚಂದ್ರ ಭಟ್ ಹೇಳಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಯೋಗದಲ್ಲಿ ನಡೆಯುವ ನಾಟಕೋತ್ಸವವನ್ನು 19ರಂದು ಸಂಜೆ 6:30ಕ್ಕೆ ವಿಟ್ಲ ಜೂನಿಯರ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎಂ.ಅನಂತಕೃಷ್ಣ ಹೆಬ್ಬಾರ್ ಉದ್ಘಾಟಿಸಲಿದ್ದು, ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧ್ಯಕ್ಷತೆ ವಹಿಸಲಿದ್ದಾರೆ. ವಿಶ್ವ ಕೊಂಕಣಿ ಕೇಂದ್ರ ಅಧ್ಯಕ್ಷ ಬಸ್ತಿ ವಾಮನ ಶೆಣೈ, ಬಂಟ್ವಾಳ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಮೋಹನ್ ರಾವ್,‌ ಮಂಚಿ ನೂಜಿಬೈಲ್ ಅನುದಾನಿತ ಹಿ.ಪ್ರಾ. ಶಾಲೆಯ ಸಂಚಾಲಕ ಶಾಂತಲಾ‌ ಎನ್. ಭಟ್ ನೂಜಿಬೈಲ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಳಿಕ 7 ಗಂಟೆಗೆ ಕೆ.ವಿ.ಸುಬ್ಬಣ್ಣ ರಚನೆಯ, ಬಿ.ಆರ್.ವೆಂಕಟರಮಣ ಐತಾಳರ ನಿರ್ದೇಶನದಲ್ಲಿ ಶಿವಮೊಗ್ಗ ರಂಗಾಯಣ ಅಭಿನಯಿಸುವ ‘ಚಾಣಕ್ಯ ಪ್ರಪಂಚ’ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಅವರು ಹೇಳಿದರು.

ಜಾಹೀರಾತು

ಮಾ.20ರಂದು ಸಂಜೆ 7 ಗಂಟೆಗೆ ಗಣೇಶ ಮಂದಾರ್ತಿ ಹಾಗೂ ಶ್ರವಣ್ ಹೆಗ್ಗೋಡು ನಿರ್ದೇಶನದಲ್ಲಿ ನಾ.‌ ಡಿ.ಸೋಜರವರ ಕಾದಂಬರಿ ಆಧಾರಿತ, ಎಸ್.ಮಾಲತಿಯವರ ರಂಗರೂಪಕ ಆಧಾರಿತ, ಶಿವಮೊಗ್ಗ ರಂಗಾಯಣ ಅಭಿನಯಿಸುವ ‘ಹಕ್ಕೀ ಕತೆ’ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಅವರು ತಿಳಿಸಿದರು.

ಮಾ.21ರಂದು ಸಂಜೆ 6:30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ. ಅಜೆಕಳ ಗಿರೀಶ್ ಭಟ್ ಅಧ್ಯಕ್ಷತೆ ವಹಿಸಲಿದ್ದು, ಸಾಹಿತಿ, ನ್ಯಾಯವಾದಿ ಶಶಿರಾಜ ಕಾವೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಸಹಾಯಕ ನಿರ್ದೇಶಕ ರಾಜೇಶ್ ಜಿ. ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಳಿಕ ಸಂಜೆ 7 ಗಂಟೆಗೆ ಕಿನ್ನರ ಮೇಳ, ತುಮುರಿ ಅಭಿನಯಿಸುವ ಯಶವಂತ ಚಿತ್ತಾಲರ ‘ಅಬೋಲಿನ್’ ಕಥೆ ಆಧಾರಿತ, ಕೆ.ಜಿ.ಕೃಷ್ಣ ಮೂರ್ತಿ ಅವರು ರಂಗ ರೂಪಾಂತರಗೊಳಿಸಿ ನಿರ್ದೇಶಿಸಿರುವ ‘ಅಬ್ಬಲ್ಲಿಗೆ’ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಂಚಿ ಬಿ.ವಿ.ಕಾರಂತ ರಂಗಭೂಮಿಕಾ ಟ್ರಸ್ಟ್ ಜೊತೆ ಕಾರ್ಯದರ್ಶಿ ರಮಾನಂದ ನೂಜಿಪ್ಪಾಡಿ, ಸದಸ್ಯ ನ್ಯಾಯವಾದಿ ರವೀಂದ್ರ ಕುಕ್ಕಾಜೆ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ