ಜಿಲ್ಲಾ ಸುದ್ದಿ

ಬಿಜೆಪಿ ಎಸ್ಸಿ ಮೋರ್ಚಾ ಕಾರ್ಯಕಾರಿಣಿ ಸಭೆ

ಮಂಗಳೂರು: ಬಿಜೆಪಿಯ ಜಿಲ್ಲಾ ಮಟ್ಟದ ಎಸ್ಸಿ ಮೋರ್ಚಾ ಕಾರ್ಯಕಾರಿಣಿ ಸಭೆ ಮಂಗಳೂರಿನಲ್ಲಿ ನಡೆಯಿತು.

ಬಿಜೆಪಿ ರಾಜ್ಯ ವಕ್ತಾರರಾದ ಹಾಗೂ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷರಾದ ಛಲವಾದಿ ನಾರಾಯಣಸ್ವಾಮಿ ಅವರು ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಕಾಂಗ್ರೆಸ್ ಮುಳುಗುತ್ತಿರುವ ಹಡಗು, ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಾಯಕರ ಸರ್ವಾಧಿಕಾರಿ ಧೋರಣೆಯಿಂದಾಗಿ, ಬಿಜೆಪಿಯವರು ದಲಿತ ವಿರೋಧಿ ಎಂದು ಆರೋಪ ಮಾಡುತ್ತಿದ್ದವು. ಆದರೆ ಬಿಜೆಪಿ ಅದಕ್ಕೆ ತನ್ನ ಕಾರ್ಯ ಚಟುವಟಿಕೆಗಳ ಮೂಲಕ ತಕ್ಕ ಉತ್ತರ ಕೊಟ್ಟಿದೆ. ಚಾಯ್ ಮಾರಾಟ ಮಾಡುವವರು ಪ್ರಧಾನಿಯಾಗಬಹುದು ಎಂಬುದನ್ನು ತೋರಿಸಿಕೊಟ್ಟಿದೆ. ದೇಶದಲ್ಲಿ ಪರಿಶಿಷ್ಟ ಜಾತಿ ಸಮುದಾಯ ಬಿಜೆಪಿಯತ್ತ ಮುಖ ಮಾಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಡಳಿತ ಹಾಗೂ ಮೋದಿಯವರ ಜನಪರ ಕಾರ್ಯಚಟುವಟಿಕೆ ಕಾರ್ಯಬದ್ಧತೆ ಹಾಗೂ ಬಿಜೆಪಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸೇರಿ ಸಂಘಟನೆಯ ಜೊತೆ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದರು 370ನೇ ವಿಧಿಯನ್ನು ರದ್ದುಗೊಳಿಸುವ ಮೂಲಕ ಜಮ್ಮು-ಕಾಶ್ಮೀರದಲ್ಲಿನ ಪರಿಶಿಷ್ಟರಿಗೆ 72 ವರ್ಷದ ಬಳಿಕ ಮೀಸಲಾತಿ ಸಿಕ್ಕಿದೆ. ಈ ಮೂಲಕ ಬಿಜೆಪಿ ಮೀಸಲಾತಿ ಸವಿಂಧಾನದ ಪರವಾಗಿದ್ದು, ಅಂಬೇಡ್ಕರ್ ಆಶಯಗಳನ್ನು ಪ್ರತಿಬಿಂಬಿಸಿದೆ ಎಂದ ಅವರು, ಮೀಸಲಾತಿಯನ್ನು ಯಾವತ್ತೂ ರದ್ದುಗೊಳಿಸುವುದು ಇಲ್ಲ ಎಂದು ಸ್ಪಷ್ಟಪಡಿಸುವ ಮೂಲಕ ಸುಳ್ಳು ಹೇಳುವವರಿಗೆ ಉತ್ತರ ನೀಡಿದೆ ಎಂದರು,

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾದ ಜಿಲ್ಲಾಧ್ಯಕ್ಷ ವಿನಯನೇತ್ರ ದಡ್ಡಲಕಾಡು ಅಧ್ಯಕ್ಷತೆಯಲ್ಲಿ ಸಭೆ ನೆರವೇರಿತು.

ಜಾಹೀರಾತು

ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ, ಭಾಜಪ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಬಾಬು, ರಾಜ್ಯ ಕೋಶ ಅಧ್ಯಕ್ಷರಾದ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಎಸ್ ಸಿ ಮೋರ್ಚಾ ಪ್ರಭಾರಿ ನಾಗೇಶ್, ಭಾಜಪ ರಾಜ್ಯ ಎಸ್ ಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯರು ಹಾಗೂ ಉಡುಪಿ ಹಾಸನ ಜಿಲ್ಲಾ ಪ್ರಭಾರಿ ಗಳಾದ ದಿನೇಶ್ ಅಮ್ಟೂರು ಪಕ್ಷ ಸಂಘಟನೆಯ ಬಗ್ಗೆ ಮಾರ್ಗದರ್ಶನ ಮಾಡಿದರು.

ಭಾಜಪ ಜಿಲ್ಲಾ ಕಾರ್ಯದರ್ಶಿ ಎಸ್ಸಿ ಮೋರ್ಚಾದ ಜಿಲ್ಲಾ ಪ್ರಭಾರಿ ಮಂಗಳ ಆಚಾರ್ಯ, ಜಿಲ್ಲಾ ಎಸ್ ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಅಣ್ಣಿ ಎಳ್ತಿ ಮಾರ್ ಮಂಡಲಗಳ ವರದಿ ಪಡೆದುಕೊಂಡರು.

ಸಭೆಯಲ್ಲಿ ಜಿಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಹಾಗೂ ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು ಜಿಲ್ಲಾ ಸಮಿತಿ ಸದಸ್ಯರಾದ ಕೇಶವ ಕನ್ಯಾಡಿ ವಂದೇ ಮಾತರಂ ಗೀತೆಯನ್ನು ಹಾಡಿದರು ಹಾಗೂ ನಿರೂಪಣೆ ಗೈದರು ಪ್ರಧಾನ ಕಾರ್ಯದರ್ಶಿ ಭೋಜ ಕೋಟ್ಯಾನ್ ಸ್ವಾಗತಿಸಿದರು ಹಾಗೂ ವಂದಿಸಿದರು

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts