ಎಬಿವಿಪಿಯಿಂದ ಬಂಟ್ವಾಳದಲ್ಲಿ ಜಾಥಾ, ಬಲಿದಾನದ ಸ್ಮರಣೆ

ಬಂಟ್ವಾಳ: ಭಗತ್ ಸಿಂಗ್, ರಾಜ್ ಗುರು ಹಾಗೂ ಸುಖ್‌ದೇವ್ ಬಲಿದಾನದ ಸ್ಮರಣಾರ್ಥ ಬಂಟ್ವಾಳ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಮಂಗಳವಾರ ಬಿ.ಸಿ.ರೋಡಿನ ಕೈಕಂಬದಿಂದ ಬೃಹತ್ ಕಾಲ್ನಡಿಗೆ ಜಾಥಾ ಹಾಗೂ ಸ್ಪರ್ಶ ಕಲಾಮಂದಿರದಲ್ಲಿ ಸಾರ್ವಜನಿಕ ಸಭೆ ನಡೆಯಿತು.

ಕಾರ್ಯಕ್ರಮದಲ್ಲಿ ವಕೀಲ ಹಾಗೂ ಹಿರಿಯ ಆರೆಸ್ಸೆಸ್ ಮುಖಂಡ ಪ್ರಸಾದ್‌ಕುಮಾರ್ ರೈ ಮಾತನಾಡಿ, ಪ್ರಾಣವನ್ನು ಅರ್ಪಿಸಿದ ಭಗತ್ ಸಿಂಗ್‌ ರಕ್ತದಲ್ಲಿಯೇ ಸ್ವಾತಂತ್ರ್ಯ ಹೋರಾಟದ ಕಿಚ್ಚು ಇತ್ತು ಎಂದರು.

ಮಂಗಳೂರು ಕಾಲೇಜು ಶಿಕ್ಷಣದ ಜಂಟಿ ನಿರ್ದೇಶಕರ ಕಚೇರಿಯ ವಿಶೇಷ ಅಧಿಕಾರಿ ದೇವಿಪ್ರಸಾದ್ ಮಾತನಾಡಿ, ಭಗತ್ ಆದರ್ಶದೊಂದಿಗೆ ನಾವು ಕೂಡ ದೇಶಕ್ಕೆ ಸೇವೆ ನೀಡಲು ಸಂಕಲ್ಪ ಕೈಗೊಳ್ಳಬೇಕಿದೆ ಎಂದರು.
ನಿವೃತ್ತ ಪ್ರಾಧ್ಯಾಪಕ ಪ್ರೊ. ನಾರಾಯಣ ಭಂಡಾರಿ, ಎಬಿವಿಪಿ ಜಿಲ್ಲಾ ಸಂಚಾಲಕ ಹರ್ಷಿತ್ ಕೊಯಿಲ, ತಾಲೂಕು ಸಂಚಾಲಕ ಅಖಿಲೇಶ್ ಉಪಸ್ಥಿತರಿದ್ದರು. ವಿಭಾಗ ಸಂಚಾಲಕ ಸಂದೇಶ್ ರೈ ಮಜಕ್ಕಾರು ಪ್ರಸ್ತಾವನೆಗೈದರು. ಗುರುಪ್ರಸಾದ್ ಸಿದ್ದಕಟ್ಟೆ ಸ್ವಾಗತಿಸಿದರು. ದಿನೇಶ್ ಕೊಯಿಲ ವಂದಿಸಿದರು. ಪ್ರಜ್ವಲ್ ಸಿದ್ದಕಟ್ಟೆ ಕಾರ್ಯಕ್ರಮ ನಿರ್ವಹಿಸಿದರು. ಸಭಾ ಕಾರ್ಯಕ್ರಮಕ್ಕೆ ಮೊದಲು ಕೈಕಂಬದಿಂದ ಜಾಥಾ ನಡೆಯಿತು. ಕಾರ್ಯಕ್ರಮದಲ್ಲಿ ಎಬಿವಿಪಿಯ ಮುಖಂಡರುಗಳಾದ ಬಸವೇಶ್ ಕೇೂರಿ ಮಂಗಳೂರು ವಿಭಾಗ ಸಂಘಟನಾ ಕಾರ್ಯದರ್ಶಿ,ಬಂಟ್ವಾಳ ತಾಲೂಕು ಸಂಚಾಲಕರಾದ ದಿನೇಶ್ ಕೊಯಿಲ, ಸಹಸಂಚಾಲಕರಾದ ಅಖಿಲಾಷ್, ನಗರ ಕಾರ್ಯದರ್ಶಿಗಾಳಾದ ನಾಗರಾಜ್ ಶೆಣೈ, ಇದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಎಬಿವಿಪಿಯಿಂದ ಬಂಟ್ವಾಳದಲ್ಲಿ ಜಾಥಾ, ಬಲಿದಾನದ ಸ್ಮರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*