28ರಂದು ಮಂಚಿ ಕನಕಗಿರಿಯಲ್ಲಿ ಧಾರ್ಮಿಕ ಮಹೋತ್ಸವ: ಧರ್ಮಜಾಗರಣಾ ಪ್ರತಿಷ್ಠಾನದ ವಿಂಶತಿ ಆಚರಣೆ

ಬಂಟ್ವಾಳ: ಮಂಚಿ ಇರಾದ ಧರ್ಮಜಾಗರಣಾ ಪ್ರತಿಷ್ಠಾನದ ವಿಂಶತಿ ಕಾರ್ಯಕ್ರಮದ ಅಂಗವಾಗಿ ಧಾರ್ಮಿಕ ಮಹೋತ್ಸವ ವೇ.ಮೂ. ಕೊಬ್ರಿಮಠ ಶ್ರೀಕಾಂತ ಬನ್ನಿಂತಾಯ ನೇತೃತ್ವದಲ್ಲಿ ಮಂಚಿ ಕೊಳ್ನಾಡಿನ ಕನಕಗಿರಿಯಲ್ಲಿ ಮಾ.28ರ ಭಾನುವಾರ ನಡೆಯಲಿದೆ ಎಂದು ಅದರ ಮುಖ್ಯಸ್ಥ ಕೈಯೂರು ನಾರಾಯಣ ಭಟ್ ತಿಳಿಸಿದ್ದಾರೆ.

ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಗುರುವಾರ ಪ್ರಮುಖರಾದ ಅನಾರು ಕೃಷ್ಣ ಶರ್ಮಾ, ಸಿ.ಎಚ್.ಸೀತಾರಾಮ ಶೆಟ್ಟಿ, ರಾಮಕೃಷ್ಣ ನಾಯಕ್ ಕೋಕಳ, ಭಾಸ್ಕರ ಕುಲಾಲ್ ಸೂತ್ರಬೈಲ್ ಉಪಸ್ಥಿತಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಸಂಸ್ಕಾರ, ಸಂಘಟನೆ, ಲೋಕಕಲ್ಯಾಣಾರ್ಥವಾಗಿ ಧಾರ್ಮಿಕ ಮಹೋತ್ಸವ ನಡೆಯಲಿದ್ದು, ಮಹಾಗಣಪತಿ ಹೋಮ, ಚಂಡಿಕಾಯಾಗ, ಸಾಮೂಹಿಕ ಕುಂಕುಮಾರ್ಚನೆ, ಧಾರ್ಮಿಕ ಸಭೆ, ಒಡಿಯೂರು ಶ್ರೀಗಳಿಗೆ 60ರ ಅಭಿವಂದನೆ ಹಾಗೂ ಪಾದಯಾತ್ರೆ ಅಂದು ನಡೆಯಲಿದೆ ಎಂದರು. 20 ವರ್ಷಗಳ ಹಿಂದೆ ಮೋಂತಿಮಾರಿನಲ್ಲಿ ನಡೆದ 108 ದಿನ ಅಖಂಡ ಭಜನೆಯ ಸವಿನೆನಪಿಗಾಗಿ ಆರಂಭಿಸಲಾದ ಧರ್ಮಜಾಗರಣಾ ಪ್ರತಿಷ್ಠಾನ 20 ವರ್ಷಗಳನ್ನು ಪೂರೈಸಿ ಮುನ್ನಡೆಯುತ್ತಿದ್ದು, ಸಂಸ್ಥೆ ನೇತೃತ್ವದಲ್ಲಿ ದೇವಸ್ಥಾನ, ಭಜನಾ ಮಂದಿರ, ದೈವಸ್ಥಾನ, ನಾಗಸ್ಥಾನಗಳ ಜೀರ್ಣೋದ್ಧಾರ ಕಾರ್ಯಗಳು ನೆರವೇರಿವೆ ಎಂದರು. 28ರಂದು ಬೆಳಗ್ಗೆ 9ಕ್ಕೆ ಸಾಮೂಹಿಕ ಕುಂಕುಮಾರ್ಚನೆ, 10ರಿಂದ ಕುಡ್ತಮುಗೇರುವಿನಿಂದ ಮಂಚಿ ಕನಕಗಿರಿಗೆ ವಾಹನ ಜಾಥ, ಬಳಿಕ ಚಂಡಿಕಾಯಾಗ ಪೂರ್ಣಾಹುತಿ, ಧಾರ್ಮಿಕ ಸಭೆ ನಡೆಯಲಿದ್ದು, ಎಡನೀರು ಶ್ರೀಗಳಾದ ಸಚ್ಚಿದಾನಂದ ಭಾರತಿ ಸ್ವಾಮೀಜಿ ಆಶೀರ್ವಚನ ನೀಡುವರು. ಒಡಿಯೂರು ಸಾಧ್ವಿ ಮಾತಾನಂದಮಯೀ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಅಧ್ಯಕ್ಷತೆಯನ್ನು ಶೃಂಗೇರಿ ಮಠ ಆಡಳಿತಾಧಿಕಾರಿ ಸತ್ಯಶಂಕರ ಬೊಳ್ಳಾವ ವಹಿಸುವರು. ಕಸಾಪ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ಕೊಳ್ನಾಡು ಗ್ರಾಪಂ ಉಪಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು ಹಾಗೂ ಉದ್ಯಮಿ ಜಗನ್ನಾಥ ಚೌಟ ಬದಿಗುಡ್ಡೆ ಅತಿಥಿಗಳಾಗಿರುವರು. ಇದೇ ಸಂದರ್ಭ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರಿಗೆ 60ರ ಅಭಿವಂದನೆ ನಡೆಸಲಾಗುತ್ತದೆ ಎಂದರು. ಅಪರಾಹ್ನ 3ರಿಂದ ಪಣೋಲಿಬೈಲ್ ಕ್ಷೇತ್ರಕ್ಕೆ ಪಾದಯಾತ್ರೆ ಇರಲಿದೆ.

ಜಾಹೀರಾತು
ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "28ರಂದು ಮಂಚಿ ಕನಕಗಿರಿಯಲ್ಲಿ ಧಾರ್ಮಿಕ ಮಹೋತ್ಸವ: ಧರ್ಮಜಾಗರಣಾ ಪ್ರತಿಷ್ಠಾನದ ವಿಂಶತಿ ಆಚರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*