ಕಲ್ಲಡ್ಕ

ಅಮ್ಟೂರಿನಲ್ಲಿ ಸ್ವಚ್ಛತಾ ಕಾರ್ಯಕ್ರಮ, ಸ್ವಚ್ಛ ಗ್ರಾಮ ಪರಿಕಲ್ಪನೆ ಸಾಕಾರಗೊಳಿಸಲು ಕರೆ

1 / 7

ಬಂಟ್ವಾಳ: ಗೋಳ್ತಮಜಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಮ್ಟೂರು ಗ್ರಾಮದಲ್ಲಿ ಸ್ವಚ್ಛತಾ ಕಾರ್ಯಕ್ರಮ ಗ್ರಾಪಂ ಸದಸ್ಯ ಗೋಪಾಲಕೃಷ್ಣ ಪೂವಳ ನೇತೃತ್ವದಲ್ಲಿ ನಡೆಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷ ಅಭಿಷೇಕ್ ಶೆಟ್ಟಿ ಮತ್ತು ಉಪಾಧ್ಯಕ್ಷೆ ಲಕ್ಷ್ಮೀ ಪ್ರಭು ಅವರು, ಕಸ ಹೆಕ್ಕುವ ಮೂಲಕ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಹಾಗೂ ಉಡುಪಿ ಹಾಸನ ಜಿಲ್ಲಾ ಎಸ್ಸಿ ಮೋರ್ಚಾ ಸಹಪ್ರಭಾರಿ,  ತಾಪಂ ಮಾಜಿ ಅಧ್ಯಕ್ಷ ದಿನೇಶ್ ಅಮ್ಟೂರು ಶುಭ ಹಾರೈಸಿ, ಸ್ವಚ್ಛ ಭಾರತ ಪರಿಕಲ್ಪನೆ ಸಾಕಾರಗೊಳಿಸಲು ಕರೆ ನೀಡಿದರು. ಸ್ವಚ್ಛತೆಯ ಕುರಿತು ವಾಹನ ಸವಾರರಲ್ಲಿ ಹಾಗೂ ಮನೆಮನೆಗಳಲ್ಲಿ ಜಾಗೃತಿ ಮೂಡಿಸಲಾಯಿತು ಶ್ರೀಕೃಷ್ಣ ಭಜನಾಮಂದಿರದ ಅಧ್ಯಕ್ಷರಾದ ರಮೇಶ್ ಶೆಟ್ಟಿ ಗಾರ್, ಅಮ್ಟೂರು ಬಿಜೆಪಿ ಸಮಿತಿಯ ಅಧ್ಯಕ್ಷರಾದ  ಬೈದರಡ್ಕ ಪ್ರಭಾಕರ ಶೆಟ್ಟಿ, ಶ್ರೀಧರ ಸುವರ್ಣ, ಗೋಳ್ತಮಜಲ್ ಗ್ರಾಮ ಪಂಚಾಯತ್ ಸದಸ್ಯರಾದ ಸುಷ್ಮಾ ಆನಂದ್, ಪ್ರೇಮ ಗುರುವಪ್ಪ, ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದ ನಿರ್ದೇಶಕರಾದ ಮಹಾಬಲ ಸಾಲ್ಯಾನ್, ಅಂಗನವಾಡಿ ಕಾರ್ಯಕರ್ತರಾದ ಸುಜಾತ ಕೊಟ್ಟಾರಿ, ಇಂದಿರಾ, ಯಶೋಧ, ಆಶಾ ಕಾರ್ಯಕರ್ತೆ ಉಮಾವತಿ, ಅನಂತಾಡಿ ಶಾಲೆಯ ಶಿಕ್ಷಕರಾದ ರಾಧಾಕೃಷ್ಣ ಕುಲಾಲ್, ಮಹಿಳಾ  ಮಂಡಲದ ಪ್ರಮುಖರಾದ ಇಂದಿರಾ ರೈ,  ಪ್ರೇಮ ಎಸ್ ಶೆಟ್ಟಿ, ಪ್ರಮುಖರಾದ ಉಮೇಶ್ ಪೂಜಾರಿ, ಯತೀಶ್ ಸಾಲ್ಯಾನ್, ಸಂದೀಪ್ ಶೆಟ್ಟಿ, ವಿಶ್ವನಾಥ್ ಕುಲಾಲ್, ಮನೋಹರ ಆಚಾರ್ಯ, ಪುಷ್ಪರಾಜ ಕುಲಾಲ್, ವಸಂತ ಕುಲಾಲ್,  ಜ್ಯೋತಿ ಮಹಿಳಾ ಮಂಡಲದ ಅಧ್ಯಕ್ಷರು ಪದಾಧಿಕಾರಿಗಳು ಸರ್ವ ಸದಸ್ಯರು ಹಾಗೂ ನೇತಾಜಿ ಯುವಕ ಸಂಘ ಪೂವಳ ಪ್ರಮುಖ ಕಾರ್ಯಕರ್ತರು ಭಾಗವಹಿಸಿದ್ದರು.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.