ಬಂಟ್ವಾಳ: ಕಾರ್ಕಳ ಜೈನಮಠದ ಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಅಜ್ಜಿಬೆಟ್ಟು ಬಸದಿ ಭಗವಾನ್ ಶ್ರೀ ಆದಿನಾಥ ತೀರ್ಥಂಕರರ ಬಿಂಬ ಪ್ರತಿಷ್ಠಾ ಮಹೋತ್ಸವದ 29ನೇ ವರ್ಧಂತ್ಯುತ್ಸವ ಏಪ್ರಿಲ್ 2ರಂದು ನಡೆಯಲಿದೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ 108 ದಿವ್ಯಸಾಗರ್ ಮುನಿಗಳ ವಿಶೇಷ ಪ್ರವಚನ ಇರಲಿದೆ ಎಂದು ಪ್ರಕಟಣೆ ತಿಳಿಸಿದೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…