ವಿಟ್ಲ

ಒಡಿಯೂರು ಶ್ರೀಗಳ ಷಷ್ಟ್ಯಬ್ದ: ಕರೋಪಾಡಿ ಗ್ರಾಮದ ಭಜನಾ ಅಭಿಯಾನ ಸಮಾರೋಪ

1 / 7

ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅವರ ಷಷ್ಟ್ಯಬ್ದ ಮಹೋತ್ಸವ ಅಂಗವಾಗಿ ಕರೋಪಾಡಿ ಗ್ರಾಮದ ಭಜನಾ ಅಭಿಯಾನದ ಸಮಾರೋಪ ಸಮಾರಂಭದ ಪೂರ್ವ ಸಮಾಲೋಚನಾ ಸಭೆ ವಗೆನಾಡು ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ಗ್ರಾಮ ಸಮಿತಿಯ ಗೌರವಾಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್ಟರ ನೇತೃತ್ವದಲ್ಲಿ ನಡೆಯಿತು.

ಮೇ.11ರ ಮಂಗಳವಾರ ಸಂಜೆ 5ರಿಂದ ವಗೆನಾಡು ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಗ್ರಾಮದ ಎಲ್ಲಾ ಭಜಕರಿಂದ ಭಜನಾ ಸಂಭ್ರಮ ಹಾಗೂ ಹನುಮಾನ್ ಚಾಲೀಸಾ ಪಠಣ ನಡೆಯಲಿದೆ. ಈ ಸಂದರ್ಭದಲ್ಲಿ ಮುಗುಳಿ ತಿರುಮಲೇಶ್ವರ ಭಟ್ಟರ ಅಧ್ಯಕ್ಷತೆಯಲ್ಲಿ ನಡೆಯುವ ಧರ್ಮಸಭೆಯಲ್ಲಿ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ನಂತರ ಗ್ರಾಮಸ್ಥರೆಲ್ಲರ ಪಾಲ್ಗೊಳ್ಳುವಿಕೆಯಲ್ಲಿ ಶ್ರೀ ಸುಬ್ರಾಯ ದೇವರಿಗೆ ವಿಶೇಷವಾಗಿ ದೀಪೋತ್ಸವ ಹಾಗೂ ಶ್ರೀ ರಂಗಪೂಜೆ ನಡೆಸಲಾಗುವುದು. ಕಾರ್ಯಕ್ರಮದ ಕೊನೆಯಲ್ಲಿ ಪ್ರಸಾದ ಭೋಜನ ನಡೆಸಲಾಗುವುದು ಎಂದು ತೀರ್ಮಾನಿಸಲಾಯಿತು. ಶಿವಪ್ರಸಾದ ಶೆಟ್ಟಿ ಅನೆಯಾಲಗುತ್ತು ಸ್ವಾಗತಿಸಿದರು. ಸೇರಾಜೆ ಗಣಪತಿ ಭಟ್ ಪ್ರಸ್ತಾಪಿಸಿದರು. ಸತ್ಯನಾರಾಯಣ ಭಟ್ ಸೇರಾಜೆ ವಂದನಾರ್ಪಣೆ ಮಾಡಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ