ಬಂಟ್ವಾಳ: ಬಂಟ್ವಾಳ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ತಾಲೂಕು ಮಟ್ಟದ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಗುತ್ತದೆ. ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಪುರಸಭೆ ಬಂಟ್ವಾಳ ಆಶ್ರಯದಲ್ಲಿ ನಡೆಯುವ 130ನೇ ಜನ್ಮದಿನಾಚರಣೆಯ ಅಧ್ಯಕ್ಷತೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ವಹಿಸುವರು. ಜಿಲ್ಲೆಯ ಸಂಸದ, ಸಚಿವರ ಸಹಿತ ಬಂಟ್ವಾಳ ತಾಲೂಕಿಗೆ ಒಳಪಡುವ ಶಾಸಕರು, ಜಿಪಂ ಸದಸ್ಯರು, ತಾಪಂ ಅಧ್ಯಕ್ಷರು, ಸದಸ್ಯರನ್ನು ಆಹ್ವಾನಿಸಲಾಗಿದೆ. ಮುಖ್ಯ ಭಾಷಣಕಾರರಾಗಿ ಶಾರದಾ ಪ್ರೌಢಶಾಲೆಯ ಕನ್ನಡ ಭಾಷಾ ಅಧ್ಯಾಪಕ ಡಿ.ಆರ್. ಧನರಾಜ್ ಮಾತನಾಡುವರು ಎಂದು ಸಮಾಜ ಕಲ್ಯಾಣ ಇಲಾಖೆ, ತಾಪಂ, ಪುರಸಭೆ ಮತ್ತು ತಾಲೂಕು ಕಚೇರಿ ಪ್ರಕಟಣೆ ತಿಳಿಸಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳದಲ್ಲಿ 14ರಂದು ತಾಲೂಕು ಮಟ್ಟದ ಅಂಬೇಡ್ಕರ್ ಜಯಂತಿ ಆಚರಣೆ"