ಬಂಟ್ವಾಳ

ಅಂಬೇಡ್ಕರ್ ಜೀವನ ನಮಗೆ ಆದರ್ಶವಾಗಲಿ: ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್

ಬಂಟ್ವಾಳ: ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವನಪಥ ನಮಗೆ ಆದರ್ಶವಾಗಲಿ, ಅವರು ತನ್ನ ಬದುಕಿನುದ್ದಕ್ಕೂ ನಡೆಸಿದ ಹೋರಾಟಗಳು ನಮಗೆ ಪ್ರೇರಣೆಯಾಗಲಿ ಎಂದು ಬಂಟ್ವಾಳ ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್ ಸಂದೇಶ ನೀಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶಕ್ಕೆ ಸಂವಿಧಾನವನ್ನು ಒದಗಿಸಿ, ಸಾಮಾಜಿಕ ನ್ಯಾಯವನ್ನು ನೀಡಲು ಶ್ರಮಿಸಿದವರು. ಶಿಕ್ಷಣ, ಮಹಿಳೆಯರ ಹಕ್ಕುಗಳು, ಸಮಾನತೆ, ಅಭಿವೃದ್ಧಿಯ ದೂರದೃಷ್ಟಿ ಅವರಲ್ಲಿತ್ತು. ಇಂದು ಜಗತ್ತೇ ನೋಡುವಂತೆ ಮಾಡಿದ ವ್ಯಕ್ತಿತ್ವ ಅಂಬೇಡ್ಕರ್ ಅವರದ್ದಾಗಿದೆ ಎಂದು ಶರೀಫ್ ಹೇಳಿದ್ದಾರೆ.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.