ಬಂಟ್ವಾಳ

ಸಿಡಿಲಿಗೆ ನಗ, ನಗದು ಕಳೆದುಕೊಂಡ ಕುಟುಂಬ, ಆಸರೆಯಾದ ಬೆಳದಿಂಗಳು ಯೋಜನೆ

ಬಂಟ್ವಾಳ: ಭಾನುವಾರ ರಾತ್ರಿ ಭಾರೀ ಗುಡುಗು-ಸಿಡಿಲಿನಿಂದ ಕೂಡಿದ ಮಳೆ ಸಂದರ್ಭ ಸಜಿಪಮುನ್ನೂರು ಗ್ರಾಮದ ಮಿತ್ತಕಟ್ಟೆ ನಿವಾಸಿ ಲಲಿತ ಅವರ ಮನೆಗೆ ಸಿಡಿಲು ಬಡಿದ ವೇಳೆ ಮನೆಯ ಕಪಾಟಿನಲ್ಲಿಟ್ಟಿದ್ದ ಚಿನ್ನಾಭರಣಗಳು ಸುಟ್ಟು ಕರಕಲಾಗಿದ್ದವು. ಸಂಬಂಧಿಕರ ಮದುವೆಗೆಂದು ಸಂಗ್ರಹಿಸಿಟ್ಟಿದ್ದ ನಗದು ಹಣವೂ ಬೆಂಕಿಗೆ ಆಹುತಿಯಾಗಿದ್ದವು.  ಈ ಕಾರಣದಿಂದ ತುರ್ತು ನೆರವು ನೀಡುವ ನಿಟ್ಟಿನಲ್ಲಿ ಗುರುಬೆಳದಿಂಗಳು ಸೇವಾ ಯೋಜನೆ ಕುದ್ರೋಳಿ ಇದರ ಪ್ರಥಮ ಸೇವಾ ಯೋಜನೆಯ ಮೊದಲ ಆಸರೆ ನೆರವು ಯೋಜನೆಯಿಂದ 50 ಸಾವಿರ ರೂಪಾಯಿ ಸಹಾಯಧನ ನೀಡಲಾಯಿತು. ಕುದ್ರೋಳಿ ಗೋಕರ್ಣನಾಥ ದೇವಸ್ಥಾನ ಅಭಿವೃದ್ದಿ ಸಮಿತಿ ಅಧ್ಯಕ್ಷ ರಾದ ದೇವೇಂದ್ರ ಪೂಜಾರಿ, ದೇವಳ ಆಡಳಿತ ಸಮಿತಿ ಕೋಶಾಧಿಕಾರಿ ಪದ್ಮರಾಜ್ ಆರ್., ಉದ್ಯಮಿ ರವಿ, ಸತೀಶ್ ಗುರುಮಂದಿರ, ವಿವೇಕ್ ಕೋಟ್ಯಾನ್, ಯಶವಂತ್ ದೇರಾಜೆ, ರಾಜೇಶ್ ಸುವರ್ಣ, ಪ್ರವೀಣ್ ಅಂಚನ್ ಮೊದಲಾದವರಿದ್ದರು. ಮನೆಗೆ ಉಂಟಾದ ಸಿಡಿಲಾಘಾತದಿಂದ ವಿದ್ಯುತ್ ಉಪಕರಣಗಳು, ಪೀಠೋಪಕರಣಗಳ ಸಹಿತ ಇತರ ಗೃಹೋಪಯೋಗಿ ವಸ್ತುಗಳು ಸುಟ್ಟು ಕರಕಲಾಗಿವೆ. ಕೋಣೆಯೊಳಗಿನ ಕಪಾಟಿಗೂ ಸಿಡಿಲು ಬಡಿದ ಪರಿಣಾಮ ಕಪಾಟಿನಲ್ಲಿದ್ದ ಚಿನ್ನಾಭರಣಗಳು ಸುಟ್ಟು ಕರಕಲಾಗಿದ್ದು, ಹಳದಿ ಚಿನ್ನ ಕಪ್ಪು ಬಣ್ಣಕ್ಕೆ ತಿರುಗಿದ್ದು ಭಾರೀ ಹಾನಿ ಸಂಭವಿಸಿದೆ. ಸಂಬಂಧಿಕರ ಮದುವೆಗೆಂದು ಸಂಗ್ರಹಿಸಿಟ್ಟಿದ್ದ ನಗದು ಹಣ ಸಿಡಿಲಿನ ಬೆಂಕಿಗೆ ಸುಟ್ಟು ಹೋಗಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ