ಜಿಲ್ಲಾ ಸುದ್ದಿ

ಎಪ್ರಿಲ್ 17ರಂದು ಹಿಂಜಾವೇ, ಹಿಂದು ಯುವವಾಹಿನಿ ವತಿಯಿಂದ ಬಿ.ಸಿ.ರೋಡಿನಲ್ಲಿ ದ.ಕ. ಜಿಲ್ಲಾ ಮಟ್ಟದ ‘ಜಾಗರಣ ಟ್ರೋಫಿ’ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾಟ

ಬಂಟ್ವಾಳ: ಹಿಂದು ಜಾಗರಣ ವೇದಿಕೆ, ಹಿಂದು ಯುವವಾಹಿನಿ ಬಂಟ್ವಾಳ ತಾಲೂಕು ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಜಾಗರಣ ಟ್ರೋಫಿ – 2021’ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾಟ ಎಪ್ರಿಲ್ 17ರಂದು ಬಿ.ಸಿ.ರೋಡ್ ಗಾಣದಪಡ್ಪು ಮೈದಾನದಲ್ಲಿ ನಡೆಯಲಿದೆ ಎಂದು ಹಿಂದು ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಸಂಪರ್ಕ ಪ್ರಮುಖ್ ನರಸಿಂಹ ಮಾಣಿ ತಿಳಿಸಿದರು.

ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದುತ್ವಕ್ಕಾಗಿ ಕ್ರೀಡೆ ಧ್ಯೇಯದೊಂದಿಗೆ ನಡೆಯುವ ಈ ಕಬಡ್ಡಿ ಕ್ರೀಡಾ ಕೂಟ ಎಪ್ರಿಲ್ 17ರಂದು ರಾತ್ರಿ 8:30ಕ್ಕೆ ಉದ್ಘಾಟನೆಗೊಳ್ಳಲಿದೆ. ಸುಮಾರು 50ರಿಂದ 60 ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದರು. ತಂಡ ನೋಂದಾಯಿಸಲು ಎಪ್ರಿಲ್ 16 ಕೊನೆಯ ದಿನವಾಗಿದ್ದು ಹಿಂದು ಬಾಂಧವರಿಗೆ ಆಡಲು ಅವಕಾಶವಿದ್ದು, ಪ್ರವೇಶ ಶುಲ್ಕ 500 ರೂ. ಆಗಿದೆ, ಪ್ರಥಮ 11,111 ರೂ. ನಗದು ಮತ್ತು ಜಾಗರಣ ಟ್ರೋಫಿ, ದ್ವಿತೀಯ 8,888 ರೂ. ನಗದು ಮತ್ತು ಜಾಗರಣ ಟ್ರೋಫಿ, ತೃತೀಯ 5,555 ರೂ. ನಗದು ಮತ್ತು ಜಾಗರಣ ಟ್ರೋಫಿ, ಚತುರ್ಥ 3,333 ರೂ. ನಗದು ಮತ್ತು ಜಾಗರಣ ಟ್ರೋಫಿ ಹಾಗೂ ಉತ್ತಮ ದಾಳಿಗಾರ, ಉತ್ತಮ ಹಿಡಿತಗಾರ ಮತ್ತು ಸವ್ಯಸಾಚಿ ಪ್ರಶಸ್ತಿ ನೀಡಲಾಗುವುದು ಎಂದರು. ಕಾರ್ಯಕ್ರಮವನ್ನು ಹಿಂದು ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ ಪ್ರಧಾನ ಕಾರ್ಯದರ್ಶಿ ಕೆ.ಟಿ.ಉಲ್ಲಾಸ್ ಉದ್ಘಾಟಿಸಲಿದ್ದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು ಜಿಲ್ಲಾ ಸಂಘಚಾಲಕ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ವೇದಿಕೆಯ ಹಲವು ನಾಯಕರು, ಉದ್ಯಮಿಗಳು, ಧಾರ್ಮಿಕ ಮುಖಂಡರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು. ಅದೇ ದಿನ ಸಂಜೆ 7:30ರಿಂದ ಸಪ್ತಸ್ವರ ಮೆಲೋಡಿಸ್ ವಾಮದಪದವು ತಂಡದಿಂದ ಸಂಗೀತ ರಸಮಂಜರಿ ನಡೆಯಲಿದೆ ಎಂದರು.ಸುದ್ದಿಗೋಷ್ಠಿಯಲ್ಲಿ ಹಿಂಜಾವೇ ಪುತ್ತೂರು ಜಿಲ್ಲಾ ಅಧ್ಯಕ್ಷ ಜಗದೀಶ್ ನೆತ್ತರಕೆರೆ, ಹಿಂದು ಯುವಾಹಿನಿ ಪುತ್ತೂರು ಜಿಲ್ಲಾ ಸಂಯೋಜಕ ಪ್ರಶಾಂತ್ ಕೆಂಪುಗುಡ್ಡೆ, ಹಿಂಜಾವೇ ಬಂಟ್ವಾಳ ತಾಲೂಕು ಅಧ್ಯಕ್ಷ ತಿರುಲೇಶ ಬೆಳ್ಳೂರು, ಪ್ರಧಾನ ಕಾರ್ಯದರ್ಶಿ ಯೋಗೀಶ್ ತುಂಬೆ, ಹಿಂದೂ ಯುವವಾಹಿನಿ ತಾಲೂಕು ಸಹಸಂಯೋಜಕ ತಿಲಕ್ ಅಮ್ಟಾಡಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ